ಸಾರಿಗೆ ಇಲಾಖೆಯಲ್ಲಿ ಉದ್ಯೋಗದ ಆಮಿಷ: ಇಬ್ಬರ ಬಂಧನ
ಬೆಂಗಳೂರು, ಅ.17: ಕೆಎಸ್ಸಾರ್ಟಿಸಿ ನಿಗಮದಲ್ಲಿ ಉದ್ಯೋಗ ಆಮಿಷವೊಡ್ಡಿ ಹಣ ವಸೂಲಿ ಮಾಡಿರುವ ಆರೋಪ ಸಂಬಂಧ ಇಬ್ಬರನ್ನು ಇಲ್ಲಿನ ಮಾಗಡಿ ರಸ್ತೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹಗರಿಬೊಮ್ಮನಹಳ್ಳಿ ನಿವಾಸಿಗಳಾದ ಮಂಜುನಾಥ್, ಅನಿಲ್ ಎಂಬುವರು ಬಂಧಿತರು ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳ ಪೈಕಿ ಮಂಜುನಾಥ್, ಈ ಹಿಂದೆ ಕೆಎಸ್ಸಾರ್ಟಿಸಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಶಿಸ್ತು ಹಾಗೂ ಉತ್ತಮ ನಡವಳಿಕೆ ತೋರದ ಹಿನ್ನೆಲೆ ಆಡಳಿತ ಮಂಡಳಿ ಇವರನ್ನು ಅಮಾನತು ಮಾಡಿತ್ತು. ಆನಂತರ ಈತ ಹಲವು ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಹಣ ಮಸೂಲಿ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.
Next Story