ಶ್ರೀರಂಗಪಟ್ಟಣ ದಸರಾಗೆ ಹೆಚ್ಚುವರಿ 20 ಲಕ್ಷ ರೂ. ಅನುದಾನ ಬಿಡುಗಡೆ
ಸಾಂದರ್ಭಿಕ ಚಿತ್ರ
ಮಂಡ್ಯ, ಅ.21: ಶ್ರೀರಂಗಪಟ್ಟಣ ದಸರಾಕ್ಕೆ ಈಗಾಗಲೇ 50 ಲಕ್ಷ ರೂ. ಹಣವನ್ನು ಮಂಜೂರು ಮಾಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡರ ಪ್ರಯತ್ನದ ಫಲವಾಗಿ ಹೆಚ್ಚುವರಿಯಾಗಿ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಮುಖಾಂತರ ಮಂಡ್ಯ ಜಿಲ್ಲಾಧಿಕಾರಿಗಳಿಗೆ 20 ಲಕ್ಷ ರೂ. ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಲಾಗಿದ್ದು, ಪ್ರವಾಸೋದ್ಯಮ ಇಲಾಖೆಯಿಂದಲೂ ಅನುದಾನ ಬಿಡುಗಡೆಯಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story