ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೆ ಏಕಿಲ್ಲ: ನಟ, ನಿರ್ದೇಶಕ ರಿಷಭ್ ಶೆಟ್ಟಿ ಪ್ರಶ್ನೆ
ಸಾಮಾಜಿಕ ಜಾಲತಾಣಗಳಲ್ಲಿ 'ರಾಜ್ಯೋತ್ಸವ ಆಚರಣೆ' ಬೆಂಬಲಿಸಿ ಅಭಿಯಾನ
photo: twitter@ChaithraBBhat
ಬೆಂಗಳೂರು: ರಾಜ್ಯೋತ್ಸವ ಮೆರವಣಿಗೆ ಬಗ್ಗೆ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ಬೆಳಗಾವಿಯಲ್ಲಿ ರಾಜ್ಯೋತ್ಸವ ಆಚರಣೆಗೆ ಕೋವಿಡ್ ನಿಯಮಗಳಿಗೆ ಒಳಪಟ್ಟಿರುವಂತೆ ಜಿಲ್ಲಾಡಳಿತ ಅನುಮತಿ ನೀಡಿದೆ.
ಇದೀಗ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ನಟ, ನಿರ್ದೇಶಕ ರಿಷಭ್ ಶೆಟ್ಟಿ ಸೇರಿದಂತೆ ಕನ್ನಡಪರ ಸಂಘಟನೆಗಳು ರಾಜ್ಯೋತ್ಸವ ಆಚರಣೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿವೆ.
''ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಆಚರಣೆ, ಇತಿಹಾಸಗಳು ಭಿನ್ನವಾದರೂ ನಾಡಿಗೆ ದಸರಾ ಜತೆಗಿನ ಭಾವನಾತ್ಮಕ ಸಂಬಂಧವೇ ರಾಜ್ಯೋತ್ಸವದೊಂದಿಗೂ ಇದೆ. ಮೈಸೂರಿನ ಸಂಭ್ರಮವೇ ಬೆಳಗಾವಿಯಲ್ಲೂ ಮುಂದುವರೆಯಲು ಮಾನ್ಯ ಮುಖ್ಯಮಂತ್ರಿಗಳು ಅವಕಾಶ ನೀಡಬೇಕಾಗಿ ವಿನಂತಿ'' ಎಂದು ನಟ, ನಿರ್ದೇಶಕ ರಿಷಭ್ ಶೆಟ್ಟಿ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಇನ್ನು #ನಮ್ಮ_ರಾಜ್ಯೋತ್ಸವ_ನಮ್ಮ_ಹಬ್ಬ ಎಂಬ ಹ್ಯಾಶ್ ಟ್ಯಾಗ್ ಜೊತೆಗೆ ಹಲವರು ಟ್ವೀಟ್ ಮಾಡಿ, ಕನ್ನಡಿಗರೆಲ್ಲರೂ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
#ನಮ್ಮ_ರಾಜ್ಯೋತ್ಸವ_ನಮ್ಮ_ಹಬ್ಬ
— Mahadev (@Mahadevmmm) October 19, 2021
it's been 2 years missing the state festival.. this has to over from this year pic.twitter.com/xIBQqNhac3
#ಕನ್ನಡ_ಕನ್ನಡಿಗ_ಕರ್ನಾಟಕ#ನಮ್ಮ_ರಾಜ್ಯೋತ್ಸವ_ನಮ್ಮ_ಹಬ್ಬ https://t.co/w4rI6FWtTw
— sanJayVshaRanu (@s_a_n_j_u_U) October 21, 2021