ಚಿಕ್ಕಮಗಳೂರು: ಬೈಕ್ನಲ್ಲಿ ಗಾಂಜಾ ಸಾಗಾಟ; ಇಬ್ಬರ ಬಂಧನ
ಚಿಕ್ಕಮಗಳೂರು, ಅ.24: ಬೈಕ್ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕೊಪ್ಪ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 750 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಿಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪಟ್ಟಣದ ನಿವಾಸಿಗಳಾದ ಸಂತೋಷ್ ಹಾಗೂ ನೌಷದ್ ಎಂಬವರು ಬೈಕ್ನಲ್ಲಿ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೈಕ್ನಲ್ಲಿ ಸಾಗುತ್ತಿದ್ದ ಇಬ್ಬರನ್ನು ಹರಿಹರಪುರ ಪೊಲೀಸ್ ಠಾಣೆಯ ಪೊಲೀಸರು ಪಟ್ಟಣ ಸಮೀಪದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ಬಳಿ 750 ಗ್ರಾಂ ಗಾಂಜಾ ಇರುವುದು ಪತ್ತೆಯಾಗಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳು ಗಾಂಜಾ ಎಲ್ಲಿ ಖರೀದಿಸಿದ್ದರು, ಯಾರು ಪೂರೈಕೆ ಮಾಡಿದ್ದರು ಹಾಗೂ ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ಪೊಲೀಸರ ತನಿಖೆ ಬಳಿಕ ತಿಳಿದು ಬರಬೇಕಿದೆ.
Next Story