ಹಾಸನ: ಇಂಜಿನಿಯರ್ ವಿದ್ಯಾರ್ಥಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
ಹಾಸನ: ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಗರದ ಹೊರವಲಯದ ಕಾಲೇಜೊಂದರ ಹಾಸ್ಟೆಲ್ ನಲ್ಲಿ ನಡೆದಿದೆ.
ಅರಸೀಕೆರೆ ತಾಲೂಕಿನ ಹಿರಿಯಾಳು ಗ್ರಾಮದ ಜಯಂತಿ ಮತ್ತು ತೌಫೇಗೌಡ ದಂಪತಿಗಳ ಪುತ್ರ ಹೇಮಂತಗೌಡ (20 ವರ್ಷ) ಎಂಬವರು ಆತ್ಮಹತ್ಯೆಗೈದ ವಿದ್ಯಾರ್ಥಿ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬಡಾವಣೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story