ಯುವತಿಯನ್ನು ಕೊಲೆಗೈದು ಯುವಕ ಆತ್ಮಹತ್ಯೆ
ಬೆಂಗಳೂರು, ಅ.27: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಹೊಸಕೋಟೆ ತಾಲ್ಲೂಕಿನ ಲಿಂಗೀರ ಮಲ್ಲಸಂದ್ರ ಗ್ರಾಮದ ಉಷಾ (24) ಕೊಲೆಯಾದ ಯುವತಿ. ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಪಾಲಕೃಷ್ಣ ಹಾಗೂ ಉಷಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಉಷಾ ಮನೆಯವರು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದ ವಿಷಯ ತಿಳಿದ ಗೋಪಾಲಕೃಷ್ಣ ಕೋಪಗೊಂಡಿದ್ದನು.
ಬುಧವಾರ ಬೆಳಗ್ಗೆ ಯುವತಿ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ತಿಳಿದುಕೊಂಡು ಆಕೆ ಮನೆಗೆ ಹೋಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ತಬರಹಳ್ಳಿ ಗ್ರಾಮದ ಕೆರೆ ಬಳಿ ಹೋಗಿ ವಿಷ ಸೇವಿಸಿ ಆತನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾದರೆ, ತಿರುಮಲಶೆಟ್ಟಿ ಹಳ್ಳಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
Next Story