ನಗರದಲ್ಲಿ ಮಕ್ಕಳ ಕಳ್ಳಸಾಗಣೆ: ಕೆಎಸ್ಎಲ್ಎಸ್ಎ ವರದಿಗೆ ಸರಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಬೆಂಗಳೂರು, ಅ.27: ನಗರದಲ್ಲಿ ಮಕ್ಕಳ ಕಳ್ಳಸಾಗಣೆಕೆ ದಂಧೆಯ ಬಗ್ಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ(ಕೆಎಸ್ಎಲ್ಎಸ್ಎ) ನೀಡಿರುವ ವರದಿ ಕುರಿತು ಪ್ರತಿಕ್ರಿಯಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ವೇಳೆ ಅರ್ಜಿದಾರರ ಪರ ವಕೀಲ ಪುತ್ತಿಗೆ ರಮೇಶ್ ವಾದಿಸಿ, ನಗರದಲ್ಲಿ ರಸ್ತೆ ಬದಿ ಆಟಿಕೆ, ಹೂ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟದಲ್ಲಿ ತೊಡಗಿರುವ ಮಕ್ಕಳ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಸರ್ವೇ ನಡೆಸಿ ವರದಿ ಸಲ್ಲಿಸಿದೆ. ಮಕ್ಕಳನ್ನು ಕಳ್ಳ ಸಾಗಣಿಕೆಗೆ ತಳ್ಳುತ್ತಿರುವ ಆಘಾತಕಾರಿ ವಿಷಯ ವರದಿಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲೆ ಮೈತ್ರೇಯಿ ಕೃಷ್ಣನ್ ವಾದಿಸಿ, ಪ್ರಾಧಿಕಾರವು 2021ರ ಜು.12 ರಂದು ವರದಿ ಸಲ್ಲಿಸಿದೆ. ಈ ವರದಿಗೆ ರಾಜ್ಯ ಸರಕಾರ ಪ್ರತಿಕ್ರಿಯೆ ನೀಡಬೇಕಿದೆ ಎಂದು ತಿಳಿಸಿದರು.
ವಕೀಲರ ವಾದ ಆಲಿಸಿದ ಪೀಠ, ಮಕ್ಕಳ ಕಳ್ಳಸಾಗಣೆಕೆ ದಂಧೆಯ ಬಗ್ಗೆ ಕೆಎಸ್ಎಲ್ಎಸ್ಎ ನೀಡಿರುವ ವರದಿ ಕುರಿತು ಪ್ರತಿಕ್ರಿಯಿಸುವಂತೆ ಸರಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.