ಮೂರು ದಿನಗಳಲ್ಲಿ ಜೆಡಿಎಸ್ಗೆ ಅಧಿಕೃತವಾಗಿ ರಾಜೀನಾಮೆ ನೀಡುತ್ತೇನೆ: ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್
ಸಂದೇಶ್ ನಾಗರಾಜ್
ಮೈಸೂರು,ನ.12: ಇನ್ನು ಮೂರು ದಿನಗಳಲ್ಲಿ ಜೆಡಿಎಸ್ ಗೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಘೋಷಿಸಿದರು.
ಈ ಕುರಿತು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ ವಿದಾಯ ಹೇಳಿ ಮೈಸೂರಿನ ಬಿಜೆಪಿ ಕಚೇರಿಯಲ್ಲೇ ಬಿಜೆಪಿ ಸೇರುತ್ತೇನೆ. ಬಿಜೆಪಿ ಸೇರುವ ದಿನ ನಾನು ಯಾಕೆ ಜೆಡಿಎಸ್ ಪಕ್ಷವನ್ನು ಬಿಟ್ಟೆ ಎಂಬುದರ ಕಾರಣ ಸುದ್ದಿಗೋಷ್ಠಿಯಲ್ಲಿ ವಿವರಿಸುತ್ತೇನೆ ಎಂದರು.
ನನ್ನ ಅಗತ್ಯ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದ್ದಂತಿಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು. ಕಳೆದ ಮೂರು ವರ್ಷಗಳಿಂದ ನಾನು ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದೇನೆ. ದೈಹಿಕವಾಗಿ ಅಷ್ಟೇ ಜೆಡಿಎಸ್ ನಲ್ಲಿದ್ದೆ. ವಿಧಾನ ಪರಿಷತ್ ಒಳಗೂ ನಾನು ಬಿಜೆಪಿ ಪರವೇ ಬಿಲ್ ಗಳಿಗೆ ಕೈ ಎತ್ತಿದ್ದೇನೆ. ಮೂರು ವರ್ಷದಿಂದ ನಾನು ಜೆಡಿಎಸ್ ನಾಯಕರ ಸಂರ್ಪಕದಲ್ಲಿ ಇಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.
Next Story