ಕೊನೆಗೂ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ವರ್ಗಾವಣೆ
ನೂತನ ಡಿಸಿಯಾಗಿ ಚಾರುಲತಾ ಸೊಮಾಲ್ ನಿಯೋಜನೆ
ಡಾ.ಎಂ.ಆರ್. ರವಿ ಚಾರುಲತಾ ಸೊಮಾಲ್
ಚಾಮರಾಜನಗರ : ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರವಿರವರನ್ನು ರಾಜ್ಯ ಸರ್ಕಾರ ಯಾವುದೇ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿ, ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೊಮಾಲ್ ನಿಯೋಜನೆ ಮಾಡಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರವಿ, ಜಿಲ್ಲೆಯ ಮಾಂಬಳ್ಳಿಯವರಾಗಿದ್ದು, ಪ್ರಸ್ತುತ ವಿಧಾನ ಪರಿಷತ್ ಚುನಾವಣೆ ಇರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಅಲ್ಲದೆ ಇವರಿಗೆ ಯಾವುದೇ ಸ್ಥಳ ನಿಯೋಜನೆಯನ್ನು ಮಾಡಿಲ್ಲ.
ಮೇ 2 ರಂದು ರಾತ್ರಿ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಎರಡು ಭಾರಿ ವರ್ಗಾವಣೆಯಾಗಿದ್ದರೂ ಸಹ ಸರ್ಕಾರದ ಮೇಲೆ ರಾಜಕಾರಣಿಗಳ ಮೂಲಕ ಪ್ರಭಾವ ಬೀರಿ ಇಲ್ಲೆ ಮುಂದುವರೆದಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರವರನ್ನು ವರ್ಗಾವಣೆ ಮಾಡುವಂತೆ ಹಲವಾರು ಸಂಘಟನೆಗಳು ಮತ್ತು ಆಕ್ಸಿಜನ್ ದುರಂತದಲ್ಲಿ ಮಡಿದವರ ಕುಟುಂಬಸ್ಥರು ಒತ್ತಾಯ ಮಾಡುತ್ತಲೇ ಬಂದಿದ್ದರು.
ಕೊನೆಗೂ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ವರ್ಗಾವಣೆಗೆ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಾಗಬೇಕಾಯಿತು.ಅಂತೂ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರವಿ ವರ್ಗಾವಣೆಯಾಗಿದ್ದಾರೆ.
ನೂತನ ಜಿಲ್ಲಾಧಿಕಾರಿ ಚಾರುಲತಾ ಸೊಮಾಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.