ಹಂಸಲೇಖರಿಗೆ ಕಿರುಕುಳ ನೀಡಲಾಗುತ್ತಿದೆ, ನಾವು ಅವರ ಜೊತೆ ನಿಲ್ಲಬೇಕು: ನಟ ಚೇತನ್ ಅಹಿಂಸಾ
ಬೆಂಗಳೂರು: ಪೇಜಾವರ ಶ್ರೀ ಕುರಿತ ಹೇಳಿಕೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚಿಸಿದ್ದರೂ ಪೊಲೀಸ್ ದೂರುಗಳನ್ನು ನೀಡುವ ಮೂಲಕ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಗುಂಪುಗಳು ಹಂಸಲೇಖ ಅವರು ಕ್ಷಮೆಯಾಚಿಸಿ ಒಂದು ವಾರವಾದ ಮೇಲೆಯೂ ಕೂಡ ಪೊಲೀಸ್ ದೂರುಗಳನ್ನು ನೀಡುವ ಮೂಲಕ ಅವರಿಗೆ ಕಿರುಕುಳ ನೀಡುತ್ತಲೇ ಇವೆ' ಎಂದು ದೂರಿದ್ದಾರೆ.
'ಇಂತಹ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಸಂಸ್ಥೆಗಳು, ಸಮಾನತೆಯನ್ನು ಬಯಸುವ ಮತ್ತು ಅದಕ್ಕಾಗಿ ಹೋರಾಡುವ ನಮ್ಮನ್ನು, ತಮ್ಮ ಅಧೀನದಲ್ಲಿಯೇ ಮುಂದುವರಿಸಲು ಬಯಸುತ್ತವೆ' ಎಂದಿರುವ ನಟ ಚೇತನ್, ನಾವು ಹಂಸಲೇಖ ಅವರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.
Brahmin & Brahminical groups continue to torment Mr Hamsalekha via police complaints nearly a week after his sincere apology
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 20, 2021
These Brahmin & Brahminical bodies want to perpetuate their millenias of subjugation of us who believe in #equality
We must stand strong w/ Mr Hamsalekha pic.twitter.com/mpWWypZblb