ಚಿಕ್ಕಮಗಳೂರು: ಭಾರೀ ಮಳೆಗೆ ಮನೆಗೋಡೆ ಕುಸಿತ; ವ್ಯಕ್ತಿ ಮೃತ್ಯು
ಚಿಕ್ಕಮಗಳೂರು: ನಿರಂತರ ಮಳೆಯಿಂದ ಮನೆಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ ಭೋವಿ ಕಾಲೋನಿಯ ನಿವಾಸಿ ಮಂಜುನಾಥ್(45) ಎಂದು ಗುರುತಿಸಲಾಗಿದೆ.
ರಾತ್ರಿ ಮಲಗಿದ್ದ ವೇಳೆ ಮನೆಗೋಡೆ ಕುಸಿದುಬಿದ್ದಿದ್ದು, ಘಟನೆಗೆ ಸಂಬಂಧಿಸಿ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಕಡೆ ಮೂಡಿಗೆರೆ ತಾಲೂಕಿನ ದೇವರ ಮಕ್ಕಿ ಗ್ರಾಮದಲ್ಲಿ ಮನೆಕುಸಿದಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Next Story