ವಿಧಾನ ಪರಿಷತ್ ಚುನಾವಣೆ: ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮೈಸೂರು: ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ, ಮತ್ತು ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಮತ್ತು ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ನಾಮಪತ್ರ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಮಂಗಳವಾರ ತಮ್ಮ ಪಕ್ಷದ ಕಾರ್ಯರ್ತರು ಮುಖಂಡರುಗಳೊಂದಿಗೆ ಆಗಮಿಸಿದ ಆಭ್ಯರ್ಥಿಗಳು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ.ಬಗಾದಿಗೌತಮ್ ಅವರಿಗೆ ಮೂರು ಸೆಟ್ ನಾಮಪತ್ರ ಸಲ್ಲಿಸಿದರು.
ತುಮಕೂರು: ಕಾಂಗ್ರೆಸ್ ಪಕ್ಷದಿಂದ ರಾಜೇಂದ್ರ. ಆರ್, ಜೆಡಿಎಸ್ ಪಕ್ಷದಿಂದ ಅನಿಲ್ ಕುಮಾರ್ ಹಾಗು ಬಿಜೆಪಿಯಿಂದ ಲೋಕೇಶಗೌಡ ಅವರು ತಮ್ಮ ಮುಖಂಡರೊಂದಿಗೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಮಡಿಕೇರಿ : ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ, ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಹಾಗೂ ಜೆಡಿಎಸ್ ನ ಇಸಾಕ್ ಖಾನ್ ಅವರುಗಳು ನಾಮಪತ್ರ ಸಲ್ಲಿಸಿದರು.