ಡಿ.ಕೆ. ಶಿವಕುಮಾರ್ ಸೇರಿ 6 ಮಂದಿಗೆ ಸಮನ್ಸ್
ಬೆಂಗಳೂರು, ನ.27: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆರೋಪ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಆರು ಮಂದಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್, ಈಶ್ವರ ಖಂಡ್ರೆ ಸೇರಿ 6 ಜನರಿಗೆ ಸಮನ್ಸ್ ಜಾರಿ ಮಾಡಿ ಖುದ್ದು ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಹಿನ್ನೆಲೆ, ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಡಿ.22ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
Next Story