ಲಂಚ ಸ್ವೀಕಾರ ಆರೋಪ: ಇಬ್ಬರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಎಸಿಬಿ ಬಲೆಗೆ
ಚಾಮರಾಜನಗರ: ಅಂಗಡಿ ಮಾಲಕರೊಬ್ಬರಿಂದ ಜಿಎಸ್ಟಿ ಹಣವನ್ನು ಲಂಚವಾಗಿ ಪಡೆಯುವ ವೇಳೆ ಇಬ್ಬರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಚಾಮರಾಜನಗರದ ವಾಣಿಜ್ಯ ತೆರಿಗೆ ಇನ್ಸ್ಪೆಕ್ಟರ್ಗಳಾದ ರವಿಕುಮಾರ್ ಮತ್ತು ಅವಿನಾಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ಚಾಮರಾಜನಗರ ತಾಲೂಕಿನ ನಾಗವಳ್ಳಿ ಅಂಗಡಿಯೊಂದರ ಮಾಲಕ ತೌಸಿಫ್ ಎಂಬುವರಿಗೆ ಸರ್ಕಾರಕ್ಕೆ ಸಲ್ಲಬೇಕಾದ ಜಿಎಸ್ಟಿ ಹಣ ಕಟ್ಟದೆ ತಮಗೆ ಹಣ ನೀಡುವಂತೆ ಈ ಅಧಿಕಾರಿಗಳು ಹೇಳಿದ್ದರು. ಒಟ್ಟು 7 ಸಾವಿರ ರೂಪಾಯಿ ಲಂಚ ಪಡೆದುಕೊಂಡು ಪರಸ್ಪರ ಹಂಚಿಕೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ರವಿಕುಮಾರ್ ಬಳಿ 2 ಸಾವಿರ ರೂ. ಪತ್ತೆಯಾದರೆ, ಅವಿನಾಶ್ ಬಳಿ 5 ಸಾವಿರ ರೂ. ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಇಬ್ಬರನ್ನೂ ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
Next Story