ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿ ಆಗಿದೆ: ಕುಮಾರಸ್ವಾಮಿ
ಮೈಸೂರು, ಡಿ.5: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿ ಆಗಿದೆ. ಬಿಜೆಪಿ-ಜೆಡಿಎಸ್ ಬೆಂಬಲ ಕುರಿತು ಸೋಮವಾರ ನಿರ್ಧಾರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನನ್ನ ಬೆಂಬಲ ಕೇಳಿದ್ದಾರೆ. ಹಾಗಾಗಿ ನನ್ನ ಮತ್ತು ಅವರ ನಡುವೆ ವೈಯಕ್ತಿಕ ಮೈತ್ರಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದವರು ನಮಗೆ ಜೆಡಿಎಸ್ ಬೆಂಬಲ ಬೇಡ ಎಂದಿದ್ದಾರೆ. ಬೇಡ ಎಂದವರಿಗೆ ನಾವು ಬೆಂಬಲ ನೀಡಲು ಸಾಧ್ಯವೇ ಇಲ್ಲ ಎಂದು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೊಸ ನಾಯಕತ್ವಕ್ಕೆ ನಿರ್ಧರಿಸಿದ್ದೇವೆ. ಈಗಾಗಲೇ ನಮಗೆ ಬೆಂಬಲ ದೊರಕುತ್ತಿರುವುದನ್ನು ನೋಡಿದರೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಗೆ ಉತ್ತಮ ವಾತಾರಣವಿದೆ ಎನಿಸುತ್ತಿದೆ. ವರುಣಾದಲ್ಲಿ ನಮ್ಮ ಪಕ್ಷಕ್ಕೆ ನಾಯಕತ್ವದ ಕೊರತೆ ಇದೆ. ಆದರೆ ನಿನ್ನೆ ಅಲ್ಲಿ ನಡೆದ ಸಭೆಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರ ಉತ್ಸಾಹ ನೋಡಿದರೆ ವರುಣಾದಲ್ಲು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.