ಮಹಾದಾಯಿ ಹೋರಾಟಗಾರರಿಗೆ ಸಮನ್ಸ್: ನ್ಯಾಯಾಲಯಕ್ಕೆ ಹಾಜರಾಗದಿರಲು ರೈತರ ನಿರ್ಧಾರ
ಧಾರವಾಡ, ಡಿ.7: ಮಹಾದಾಯಿ ಹೋರಾಟಗಾರರಿಗೆ ನವಲಗುಂದ ಜೆಎಂಎಫ್ಸಿ ಕೋರ್ಟ್ ಮಂಗಳವಾರ ಹಾಜರಾಗುವಂತೆ ಸಮನ್ಸ್ ನೀಡಿತ್ತು, ಆದರೆ ನ್ಯಾಯಾಲಯಕ್ಕೆ ಹಾಜರಾಗದಿರಲು ಹೋರಾಟಗಾರರು ನಿರ್ಣಯ ಮಾಡಿದ್ದಾರೆ.
ಸರಕಾರ ಎಲ್ಲ 56 ಕೇಸ್ ವಾಪಸ್ ಪಡೆಯುವುದಾಗಿ ಹೇಳಿತ್ತು. ಆದರೆ 51 ಅನ್ನು ಮಾತ್ರವೇ ವಾಪಸ್ ಪಡೆದಿತ್ತು. ಉಳಿದ ಐದು ಕೇಸುಗಳನ್ನು ಹಾಗೆಯೇ ಬಿಟ್ಟಿದ್ದರಿಂದ ಅವುಗಳಿಗೆ ಈಗ ಸಮನ್ಸ್ ಬಂದಿವೆ ಎಂದು ಮಹಾದಾಯಿ ಹೋರಾಟಗಾರ ಲೋಕನಾಥ ಹೆಬಸೂರ ತಿಳಿಸಿದ್ದಾರೆ.
ಡಿ. 13ಕ್ಕೆ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಇದೆ. ಅಷ್ಟರೊಳಗೆ ಸರಕಾರ ಕ್ಯಾಬಿನೆಟ್ನಲ್ಲಿ ಈ ಕುರಿತು ಚರ್ಚೆ ಮಾಡಿ ಕ್ಯಾಬಿನೆಟ್ನಲ್ಲಿ ಕೇಸ್ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Next Story