ಮೈಸೂರು: ವಿದ್ಯುತ್ ಸ್ಪರ್ಶಿಸಿ ಯುವಕ ಸಾವು
ಮೈಸೂರು,ಡಿ.7: ಟ್ಯೂಷನ್ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ತ್ಯಾಗರಾಜ ಕಾಲೋನಿಯ ಶ್ರೀನಿವಾಸ್(21) ಎಂದು ತಿಳಿದು ಬಂದಿದೆ. ಸ್ನೇಹಿತರ ಜೊತೆ ಸೇರಿ ಟ್ಯೂಷನ್ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಶಾಕ್ ನಿಂದ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದ ಎನ್ನಲಾಗಿದೆ. ಸ್ನೇಹಿತರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story