ಸಿದ್ದರಾಮಯ್ಯ ವೇಸ್ಟ್ ಬಾಡಿ, ಮುಂದಿನ ಚುನಾವಣೆಯಲ್ಲಿ ಸೋಲ್ತಾರೆ: ರಮೇಶ್ ಜಾರಕಿಹೊಳಿ ತಿರುಗೇಟು
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿಯ ಬಿಜೆಪಿ ಅಭ್ಯರ್ಥಿಯ ಸೋಲಿಗೆ ರಮೇಶ್ ಜಾರಕಿಹೊಳಿ ಕಾರಣ ಎಂದು ಹೆಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಅವರದ್ದೇ ಸಮುದಾಯದ ಜನರು ತಿರಸ್ಕರಿಸಿದ್ದಾರೆ ಎಂಬ ಭಯ ಶುರುವಾಗಿದೆ. ಅವರು ಮುಂದಿನ ಚುನಾವಣೆಲ್ಲಿ ಸೋಲುತ್ತಾರೆ ಎಂದು ರಮೆಶ್ ಜಾರಕಿಹೊಳಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಪರಿಷತ್ ಚುನಾವನೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಇಲ್ಲಿ ಮತದಾನಕ್ಕೆ ಕೊನೆಯ ದಿನದಲ್ಲಿ ಭಾರೀ ಬದಲಾವಣೆಯಾಗಿದೆ. ಪಕ್ಷದ ಮುಖಂಡರ ಜೊತೆ ಚರ್ಚಿಸಿ ಮುಂದಿನ ದಿನ ಈ ಕುರಿತು ಹೇಳಿಕೆ ನೀಡುತ್ತೇನೆ ಎಂದು ಹೇಳಿದರು.
Next Story