'ಡಿಕೆಶಿ ದಾಟಲಿಲ್ಲ, ಮೇಕೆಯಾದರೂ ದಾಟಲಿ': ನದಿ ದಡದಲ್ಲಿ ಜಾರಿ ಬಿದ್ದ ಡಿಕೆಶಿ ವೀಡಿಯೊಗೆ ಪ್ರತಿಕ್ರಿಯಿಸಿದ ಬಿಜೆಪಿ
ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪಾದಯಾತ್ರೆಗೆ ಕನಕಪುರದ ಕಾವೇರಿ ಸಂಗಮದಿಂದ ಚಾಲನೆ ಸಿಕ್ಕಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನಕಪುರದ ಕಾವೇರಿ, ಆರ್ಕಾವತಿ, ವೃಷಭಾವತಿ ನದಿಗಳ ಸಂಗಮದಲ್ಲಿ ಪಾದಯಾತ್ರೆಯ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಾರಿ ಬಿದ್ದರು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ವೈರಲ್ ಆಗಿದೆ.
ಇದೀಗ ಈ ವೀಡಿಯೋವನ್ನು ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ 'ಡಿಕೆಶಿ ದಾಟಲಿಲ್ಲ, ಮೇಕೆಯಾದರೂ ದಾಟಲಿ'! ಎಂದು ಪ್ರತಿಕ್ರಿಯಿಸಿದೆ.
ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ!#ಸುಳ್ಳಿನಜಾತ್ರೆ pic.twitter.com/xibQDTIyWw
— BJP Karnataka (@BJP4Karnataka) January 9, 2022
Next Story