ಮಡಿಕೇರಿ: ಉರುಳು ಹಾಕಿ ಜಿಂಕೆ ಹತ್ಯೆ; ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
ಮಡಿಕೇರಿ ಜ.17 : ಉರುಳು ಹಾಕಿ ಜಿಂಕೆಯೊಂದನ್ನು ಹತ್ಯೆ ಮಾಡಿದ ವ್ಯಕ್ತಿಯನ್ನು ಮಡಿಕೇರಿ ಪೊಲೀಸ್ ಅರಣ್ಯ ಸಂಚಾರಿದಳದ ಸಿಬ್ಬಂದಿ ಬಂಧಿಸಿದ್ದಾರೆ.
ಸೋಮವಾರಪೇಟೆ ತಾಲೂಕಿನ ಮಾವಿನಹಳ್ಳ ಹಾಡಿಯ ಕುಮಾರ ಎಂಬಾತ ಆನೆಕಾಡು ಮೀಸಲು ಅರಣ್ಯದಲ್ಲಿ ಉರುಳು ಹಾಕಿ ಜಿಂಕೆಯನ್ನು ಹತ್ಯೆ ಮಾಡಿ, ಮಾಂಸವನ್ನು ಭಕ್ಷಿಸಲಾಗಿತ್ತು. ಈ ಬಗ್ಗೆ ದೊರೆತ ಸುಳಿವಿನ ಮೇಲೆ ದಾಳಿ ನಡೆಸಿದ ಪೊಲೀಸರು ಜಿಂಕೆಯ ಚರ್ಮ ಸಹಿತವಾಗಿ ಆರೋಪಿ ಕುಮಾರನನ್ನು ಬಂಧಿಸಿದ್ದಾರೆ.
ಈತನೊಂದಿಗೆ ಸಹಕರಿಸಿರುವ ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಈತನ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಮಹಾನಿರ್ದೇಶಕ ಕೆ.ವಿ.ಶರತ್ಚಂದ್ರ ನಿರ್ದೇಶನದಲ್ಲಿ ಮಡಿಕೇರಿಯ ಸಿಐಡಿ ಘಟಕದ ಅಧೀಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಅರಣ್ಯ ಸಂಚಾರಿದಳದ ಎಸ್.ಐ.ಸಿ.ಯು ಸವಿ, ಹೆಡ್ಕಾನ್ಸ್ಟೇಬಲ್ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ್, ಸಿಬ್ಬಂದಿಗಳಾದ ಸ್ವಾಮಿ, ಮಂಜುನಾಥ್ ಪಾಲ್ಗೊಂಡಿದ್ದರು.
Next Story