ಚಾಮರಾಜನಗರ: ಚಿಕ್ಕಹೊಳೆ ಜಲಾಶಯಕ್ಕಿಳಿದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಚಿಕ್ಕಹೊಳೆ ಜಲಾಶಯಕ್ಕಿಳಿದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಚಾಮರಾಜನಗರ ತಾಲೂಕಿನ ಚೆಂದುಕಟ್ಟೆಮೋಳೆ ಗ್ರಾಮದ ಕುಮಾರ್ ಎಂಬುವರ ಪುತ್ರಿ ಸೌಂದರ್ಯ(15) ಮೃತ ದುರ್ದೈವಿ. ಮೃತ ಸೌಂದರ್ಯ ತನ್ನ ಸ್ನೇಹಿತೆಯೊಟ್ಟಿಗೆ ಬುಧವಾರ ಜಲಾಶಯ ನೋಡಲು ತೆರಳಿದ್ದಳು. ಆ ವೇಳೆ, ಈಜಲು ಬಾರದಿದ್ದರೂ ನೀರಿಗೆ ಇಳಿದಿದ್ದರಿಂದ ಈ ಅವಘಡ ಉಂಟಾಗಿದೆ ಎಂದು ಜೊತೆಗೆ ತೆರಳಿದ್ದ ಸ್ನೇಹಿತೆ ತಿಳಿಸಿದ್ದಾಳೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story