ಕಲಬುರಗಿ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಮೃತ ರೈತ ಬಸಪ್ಪ ಜುಮ್ಮಣ್ಣ ನಗನೂರ
ಕಲಬುರಗಿ: ಸಾಲ ಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡ್ರಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
ಯಡ್ರಾಮಿ ತಾಲೂಕಿನ ಆಲೂರ ಗ್ರಾಮ ನಿವಾಸಿ ಬಸಪ್ಪ ಜುಮ್ಮಣ್ಣ ನಗನೂರ (55) ಆತ್ಮಹತ್ಯೆಗೆ ಶರಣಾದ ರೈತ.
ಕೆಜಿಬಿ ಬ್ಯಾಂಕ್ ಲ್ಲಿ 1.5 ಲಕ್ಷ ರೂ. ಹಾಗೂ ಖಾಸಗಿ 6 ಲಕ್ಷ ರೂ. ಸಾಲ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
ಮೃತ ರೈತ ಗ್ರಾಮದಲ್ಲಿ ಐದೂವರೆ ಹೆಕ್ಟೇರ್ ಜಮೀನು ಹೊಂದಿದ್ದರು. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story