ಸಿದ್ದರಾಮಯ್ಯ, ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ: ಬಿಜೆಪಿ ವ್ಯಂಗ್ಯ
ಬೆಂಗಳೂರು: 'ಸಿದ್ದರಾಮಯ್ಯ, ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ' ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸಿದ್ದರಾಮಯ್ಯ , ಡಿ.ಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದೆ.
''ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ'' ಎಂದು ಬಿಜೆಪಿ ಒತ್ತಾಯಿಸಿದೆ.
''ಸಿದ್ದರಾಮಯ್ಯನವರೇ, ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ'' ಎಂದು ಬಿಜೆಪಿ ಟೀಕಿಸಿದೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ.
— BJP Karnataka (@BJP4Karnataka) January 25, 2022
ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ.
ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ.#ಕಾಂಗ್ರೆಸ್ಕಳ್ಳಾಟ pic.twitter.com/YSz3F9QZtA