Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ಆರೋಪ:...

ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ಆರೋಪ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಪೊರಕೆ ಚಳವಳಿ

ಮಲ್ಲಿಕಾರ್ಜುನ ಗೌಡ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಬಂದ್: ಜ್ಞಾನಪ್ರಕಾಶ್ ಸ್ವಾಮೀಜಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ2 Feb 2022 6:51 PM IST
share
ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ಆರೋಪ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಪೊರಕೆ ಚಳವಳಿ

ಮೈಸೂರು,ಫೆ.2: ರಾಯಚೂರು ನ್ಯಾಯಾಲಯದಲ್ಲಿ ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ್ದಾರೆಂದು ಆರೋಪಿಸಿ ಗಾಂಧಿನಗರ ದಲಿತ ಸಂಘಟನೆಗಳು ಮತ್ತು ಪ್ರಗತಿಪರ ಚಿಂತಕರ ಒಕ್ಕೂಟದ ವತಿಯಿಂದ ಬೃಹತ್ ಪೊರಕೆ ಚಳವಳಿ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ನಗರದ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ದಲಿತರು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗಾಂಧಿನಗರ ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಪುಲಿಕೇಶಿ ರಸ್ತೆ, ಅಶೋಕ ರಸ್ತೆ, ದೊಡ್ಡ ಗಡಿಯಾರ, ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ ಮೂಲಕ ಸಾಗಿ ಜೆಎಲ್‌ಬಿ ರಸ್ತೆ, ಮೆಟ್ರೊಪೋಲ್ ವೃತ್ತ, ಹುಣಸೂರು ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಯನ್ನು ತಲುಪಿದರು.

ನಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾತನಾಡಿದ ಜ್ಞಾನಪ್ರಕಾಶ್ ಸ್ವಾಮೀಜಿ, ನಾಳೆಯೊಳಗೆ ಮಲ್ಲಿಕಾರ್ಜಜ ಗೌಡ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ಈಗಾಗಲೆ ಮೈಸೂರು ಮಂಡ್ಯ, ಚಾಮರಾಜನಗರ ಮಡಿಕೇರಿ ಜಿಲ್ಲೆಗಳ ಮುಖಂಡರುಗಳ ಜೊತೆ ಚರ್ಚೆ ನಡೆಸಲಾಗಿದೆ. ಮುಂದಿನ ಹೋರಾಟದ ರೂಪು ರೇಷೆಗಳನ್ನು ಸಿದ್ದಪಡಿಸಿ ರಾಜ್ಯ ಬಂದ್‌ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪೊರಕೆ ಚಳವಳಿ ಮೈಸೂರಿಗೆ ಮಾತ್ರ ಸೀಮಿತಗೊಳ್ಳುವುದಿಲ್ಲ, ಇದು ಬೆಂಗಳೂರಿನ ಹೈಕೊರ್ಟ್ ಮುಂಭಾಗ ಬರುತ್ತದೆ. ನ್ಯಾಯಾಲಯದ ಕಲಾಪಗಳಿಗೆ ಅಡ್ಡಿಪಡಿಸಲಾಗುವುದು. ಈ ಪೊರಕೆ ಚಳವಳಿ ಉಗ್ರರೂಪ ತಾಳಿ ಬಜೆಟ್ ಅಧಿವೇಶನ ಮಾಡಲು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್,  ನಗರಪಾಲಿಕೆ ಸದಸ್ಯೆರುಗಳಾದ ಪಲ್ಲವಿ ಬೇಗಂ, ಡಾ.ಅಶ್ವಿನಿ ಶರತ್, ಮಾಜಿ ನಗರಪಾಲಿಕೆ ಸದಸ್ಯ ಸಿದ್ದಪ್ಪ, ಸುರೇಶ್, ಉದಯಕುಮಾರ್,  ಎಸ್‌ಡಿಪಿಐ ಅಬ್ದುಲ್ ಮಜೀದ್, ದಸಂಸ ಮುಖಂಡರುಗಳಾದ ಚೋರನಹಳ್ಳಿ ಶಿವಣ್ಣ, ಕಲ್ಲಹಳ್ಳಿ ಕುಮಾರ್, ವಕೀಲ ಪುನೀತ್, ಗಾಂಧಿನಗರದ ಮುಖಂಡರುಗಳಾದ ಪ್ರಕಾಶ್, ಅಜಯ್, ಕರ್ಣ, ರಮೆಶ್, ಸೇರಿದಂತೆ ನೂರಾರು ಬಂದಿ ಭಾಗವಹಿಸಿದ್ದರು.

"ನಾನು ದಲಿತ ಎಂದು ಹೇಳಿಕೊಳ್ಳುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈಗ ಏಕೆ ಈ ಪ್ರಕರಣದ ಬಗ್ಗೆ ಒಂದು ಹೇಳಿಕೆಯನ್ನು ನೀಡದೆ ಮೌನವಹಿಸಿದ್ದಾರೆ? ಕೂಡಲೇ ಅವರು ವಿಧಾನಸೌಧದಲ್ಲಿ ಇದರ ಬಗ್ಗೆ ಧನಿ ಎತ್ತಬೇಕು"
ಪುರುಷೋತ್ತಮ್, ಮಾಜಿ ಮೇಯರ್.


"ಅಂಬೇಡ್ಕರ್ ಈ ದೇಶದ ಮಹಾನ್ ನಾಯಕ ಅವರಿಗೆ ಅಪಮಾನ ಮಾಡಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇಷ್ಟು ದಿನ ಕಳೆದರೂ ಏಕೆ ಮಲ್ಲಿಕಾರ್ಜುನ ಗೌಡನ ವಿರುದ್ಧ ಕ್ರಮ ಕೈಗೊಂಡಿಲ್ಲ? ಸರ್ಕಾರ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದರೆ ಮುಂದೆ ಆಗುವ ಅನಾಹುತಕ್ಕೆ ಸರ್ಕಾರವೇ ಕಾರಣವಾಗುತ್ತದೆ.
ಡಾ.ಅಶ್ವಿನ್ ಶರತ್, ನಗರಪಾಲಿಕೆ ಸದಸ್ಯೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X