ಹಿಜಾಬ್ ಧರಿಸದೇ ತರಗತಿಗೆ ಬನ್ನಿ: ವಿದ್ಯಾರ್ಥಿಗಳಿಗೆ ಭದ್ರಾವತಿ ಪಟ್ಟಣ ಸರ್ಕಾರಿ ಕಾಲೇಜು ಸೂಚನೆ
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಉಡುಪಿಯ ಪದವಿಪೂರ್ವ ಕಾಲೇಜಿನ ಹಿಜಾಬ್ ವಿವಾದ ರಾಜ್ಯಾದ್ಯಂತ ಸುದ್ದಿ ಮಾಡಿರುವ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆ ಭದ್ರಾವತಿ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಕೂಡಾ ಹಿಜಾಬ್ ಧರಿಸದೇ ತರಗತಿಗಳಿಗೆ ಹಾಜರಾಗುವಂತೆ ಪ್ರಾಚಾರ್ಯರು ಸೂಚನೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಹಿಜಾಬ್ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿನಿಯರು ಗುರುವಾರದಿಂದ ಇವುಗಳನ್ನು ನಿರೀಕ್ಷಣಾ ಕೊಠಡಿಯಲ್ಲಿ ತೆಗೆದಿರಿಸಿ ತರಗತಿಗೆ ಹಾಜರಾಗಬೇಕು ಎಂದು ವಿಶ್ವೇಶ್ವರಯ್ಯ ಸರ್ಕಾರಿ ಕಾಲೇಜಿನ ಪ್ರಾಚಾರ್ಯರು ಸೂಚನೆ ನೀಡಿದ್ದಾರೆ.
ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಆಗಮಿಸಿ, ತರಗತಿಯಲ್ಲಿ ಹಿಜಾಬ್ ಧರಿಸದಂತೆ ಸಹಪಾಠಿಗಳಿಗೆ ಕೇಳಿಕೊಂಡ ಬೆನ್ನಲ್ಲೇ ಈ ಸೂಚನೆ ಹೊರಬಿದ್ದಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುವುದನ್ನು ಪ್ರತಿಭಟಿಸಿ ಕೇಸರಿ ಶಾಲುಗಳನ್ನು ಹಾಕಿಕೊಂಡು ತರಗತಿಗೆ ಕೆಲ ವಿದ್ಯಾರ್ಥಿಗಳು ಬರುತ್ತಿರುವ ಪ್ರಕರಣಗಳು ವಿವಿಧೆಡೆ ವರದಿಯಾಗಿವೆ.
Next Story