Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣ ಸಚಿವರು ಆರೆಸೆಸ್ಸ್ ಆಜ್ಞಾ...

ಶಿಕ್ಷಣ ಸಚಿವರು ಆರೆಸೆಸ್ಸ್ ಆಜ್ಞಾ ಪಾಲಕರಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು: ಮಾಜಿ ಸಚಿವ ಡಾ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ4 Feb 2022 8:31 PM IST
share
ಶಿಕ್ಷಣ ಸಚಿವರು ಆರೆಸೆಸ್ಸ್ ಆಜ್ಞಾ ಪಾಲಕರಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು: ಮಾಜಿ ಸಚಿವ ಡಾ.ಮಹದೇವಪ್ಪ

ಬೆಂಗಳೂರು, ಫೆ. 4: `ಹೆಣ್ಣು ಮಕ್ಕಳಿಗೆ ಶಿಕ್ಷಣ ಎಂಬ ಶಕ್ತಿಯನ್ನು ತುಂಬಿ ಅವರಲ್ಲಿ ವಿಶ್ವಾಸ ಮೂಡಿಸಬೇಕಾದ ಶಿಕ್ಷಣ ಸಂಸ್ಥೆಗಳು ಅವರನ್ನು ಧರ್ಮದ ಹೆಸರಲ್ಲಿ ಹೀಗೆ ಶಾಲಾ ಆವರಣದಿಂದ ಹೊರಗೆ ಕೂರಿಸಿರುವುದು ಅಸಂವಿಧಾನಿಕವಾದ ಕ್ರಮವಾಗಿದೆ. ಹಿಜಾಬ್ ಧರಿಸುವ ಸಂಗತಿಯು ಕಾನೂನಿನ ವಿಷಯವಲ್ಲ ಎಂಬ ಸಂಗತಿಯನ್ನು ಶಿಕ್ಷಣ ಇಲಾಖೆ ಅರಿಯಲಿ. ಇದರ ಜೊತೆಗೆ ಸಮವಸ್ತ್ರವನ್ನೇ ಧರಿಸಿ ಬಂದಿದ್ದರೂ ಅವರನ್ನು ಹೊರಗೆ ಕೂರಿಸುವಷ್ಟು ಅಹಂಕಾರ ತೋರುತ್ತಿರುವುದು ಏಕೆ?' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರಶ್ನಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, `ಇನ್ನು ಹಿಜಾಬ್(ಸ್ಕಾರ್ಫ್) ಎನ್ನುವುದು ಶಾಲಾ ಆವರಣದಲ್ಲಿ ಆಚರಿಸುವ ಹಿಂದೂ ಹಬ್ಬಗಳು ಮತ್ತು ಪೂಜೆಯಷ್ಟೇ ಸ್ವಾಭಾವಿಕವಾಗಿರುವಂತಹ ಸಂಗತಿ. ಯಾವುದೇ ಮುಸ್ಲಿಂ ಸಂಘಟನೆಗಳಾಗಲೀ ವಿದ್ಯಾರ್ಥಿಗಳಾಗಲೀ ಏಕೆ ಶಾಲಾ ಆವರಣದಲ್ಲಿ ಅನ್ಯ ಧರ್ಮದ ಆಚರಣೆ ಇದೆ ಎಂದು ಪ್ರಶ್ನಿಸಿಲ್ಲ, ಶಾಲೆಯಲ್ಲಿ ಗಣಪತಿ ಕೂರಿಸಿದಾಗ ಬಂದು ರೋಜಾ ಪ್ರಾರ್ಥನೆ ಮಾಡಿಲ್ಲ, ರಕ್ಷಾ ಬಂಧನಕ್ಕೆ ಎದುರಾಗಿ ಬಕ್ರೀದ್ ಆಚರಿಸಿಲ್ಲ, ಸರಸ್ವತಿ ಪೂಜೆಗೆ ವಿರುದ್ಧವಾಗಿ ನಮಾಜ್ ಮಾಡಲು ಹೊರಟಿಲ್ಲ' ಎಂದು ಸ್ಪಷ್ಟಣೆ ನೀಡಿದ್ದಾರೆ.

`ಇಷ್ಟೆಲ್ಲಾ ಸಾಮರಸ್ಯದ ವಾತಾವರಣ ಇದ್ದರೂ ಹಿಜಾಬ್ ಎಂಬ ಸಹ ಸಂಗತಿಗೆ ಎದುರಾಗಿ ಶಾಲಾ ಆವರಣದಲ್ಲಿ ಮಕ್ಕಳು ಕೇಸರಿ ಶಾಲು ಹಾಕಿಕೊಂಡು ದ್ವೇಷದ ಸ್ಪರ್ಧೆಗೆ ಬಿದ್ದವರಂತೆ ಆಡುತ್ತಿರುವುದನ್ನು ನೋಡಿದರೆ ಆ ಭಾಗದಲ್ಲಿ ಕೋಮುದ್ವೇಷದ ವಿಷ ಮಕ್ಕಳನ್ನು ಎಷ್ಟರ ಮಟ್ಟಿಗೆ ಅಸಂವಿಧಾನಿಕ ಮಾರ್ಗದಲ್ಲಿ ಹೋಗುವಂತೆ ಪ್ರೇರೇಪಿಸುತ್ತಿದೆಯಲ್ಲಾ ಎಂದೆನಿಸುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಓದುವುದಕ್ಕಿಂತ ಮದುವೆ ಮಾಡಿಸುವುದೇ ಸೂಕ್ತ ಎಂಬ ತಿಳುವಳಿಕೆಯು ಇನ್ನೂ ಬಲವಾಗಿರುವ ಸಂದರ್ಭದಲ್ಲಿ ಇಂತಹ ಕೆಟ್ಟ ನಡವಳಿಕೆಗಳು ಅವರನ್ನು ಶಿಕ್ಷಣದಿಂದ ದೂರ ಉಳಿಯುವಂತೆ ಮಾಡುತ್ತದೆ' ಎಂದು ಅವರು ಸೂಚಿಸಿದ್ದಾರೆ.

`ಹೆಣ್ಣು ಮಕ್ಕಳೆಂದರೆ ಕೇವಲ ಮನೆಗೆಲಸಕ್ಕೆ ಸೀಮಿತ ಎಂದು ತಿಳಿದಿರುವ ಮನುವಾದಿಗಳ ಉದ್ದೇಶವೂ ಅದೇ ಆಗಿರುವುದರಿಂದ ಈ ಹಿಜಾಬ್ ಘಟನೆಯನ್ನೂ ಆ ಸಾಲಿಗೆ ಸೇರಿಸಿ ನೋಡಬಹುದು ಎನಿಸುತ್ತದೆ. ಕೂಡಲೇ ಗೃಹ ಸಚಿವರು ಸಹಜ ಧಾರ್ಮಿಕ ಸೂಕ್ಷ್ಮಗಳನ್ನು ಸರಿಯಾದ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು ಮತ್ತು ಶಿಕ್ಷಣ ಇಲಾಖೆಯ ಸಚಿವರೂ ತಾವು ರಾಜ್ಯ ಸರಕಾರದ ಸಚಿವರೇ ಹೊರತು, ಆರೆಸೆಸ್ಸ್‍ನ ಆಜ್ಞಾಪಾಲಕರಲ್ಲ ಎಂಬ ಸಂಗತಿಯನ್ನು ನೆನಪಿಟ್ಟುಕೊಂಡು ವರ್ತಿಸಬೇಕು!' ಎಂದು ಡಾ.ಎಚ್.ಸಿ.ಮಹದೇವಪ್ಪ ಮಾರ್ಮಿಕವಾಗಿ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X