ಶಿವಮೊಗ್ಗ: ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ ವಿದ್ಯಾರ್ಥಿಗಳು!
ಬಾಪೂಜಿನಗರದ ಸರ್ಕಾರಿ ಕಾಲೇಜು ಆವರಣದಲ್ಲಿ ಕಲ್ಲು ತೂರಾಟ
ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ಗಲಾಟೆ ಇದೀಗ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡದು ಕೊಂಡಿದ್ದು, ಇಲ್ಲಿನ ಸರಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಕಾಲೇಜಿನ ಧ್ವಜಸ್ತಂಭದಲ್ಲಿಕೇಸರಿ ಧ್ವಜ ಹಾರಿಸಿದ್ದಾರೆ.
ವಿದ್ಯಾರ್ಥಿನಿಗಳಿಗೆ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನಿರಾಕರಿಸುವಂತೆ ಒತ್ತಾಯಿಸಿ ಕೇಸರಿ ಶಾಲು ಧರಿಸಿ ಬಂದ ಕೆಲವು ವಿದ್ಯಾರ್ಥೀಗಳು ಕಾಲೇಜಿನ ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದಾರೆ.
ಈ ಕುರಿತಾದ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನು ನಗರದ ಬಾಪೂಜಿನಗರ ದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರಭಾಗದಲ್ಲಿ ಪರಸ್ಪರ ಕಲ್ಲುತೂರಾಟ ನಡೆದಿದೆ.
ಶಲ್ಯಧಾರಿ ವಿದ್ಯಾರ್ಥಿಗಳ ಗುಂಪಿನ ಕಡೆ ಅನ್ಯಕೋಮಿನ ಯುವಕರು ಕಲ್ಲು ತೂರಿದ ಘಟನೆ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಮತ್ತೊಂದು ಯುವಕರ ಗುಂಪು ಕಲ್ಲು ತೂರಿದೆ.
ಎಸ್ ಪಿ ಲಕ್ಷ್ಮಿಪ್ರಸಾದ್ ಖುದ್ದು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
Next Story