ಮಂಡ್ಯ: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ರೈತಮುಖಂಡನ ಮೃತ ದೇಹ ಪತ್ತೆ
ಕೃಷ್ಣೇಗೌಡ
ಮಂಡ್ಯ, ಫೆ.16: ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿ ಗ್ರಾಮದ ರೈತಸಂಘದ ಮುಖಂಡ, ಎಳನೀರು ವ್ಯಾಪಾರಿ ಕೃಷ್ಣೇಗೌಡ(45) ಅವರ ಮೃತ ದೇಹವು ಆತ್ಮಹತ್ಯೆಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತಮ್ಮ ಜಮೀನಿನ ಬಳಿ ಮರದ ಕೊಂಬೆಗೆ ಹಗ್ಗದಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಸ್ಥಿತಿಯಲ್ಲಿ ಮೃತ ದೇಹವು ಪತ್ತೆಯಾಗಿದೆ. ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ರೈತ ಮುಖಂಡ ಬೂಕನಕೆರೆ ನಾಗರಾಜು ಆಗ್ರಹಿಸಿದ್ದಾರೆ.
ಕೃಷ್ಣೇಗೌಡರ ಪತ್ನಿ ಲತಾ ಗ್ರಾಮಾಂತರ ಪೊಲಿಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅಸಹಜ ಸಾವಿನ ಪ್ರಕರಣವೆಂದು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೃಷ್ಣೇಗೌಡರ ನಿಧನಕ್ಕೆ, ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ಮುಖಂಡರ ಮುದುಗೆರೆ ರಾಜೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story