ಪುತ್ರನ ರಾಜಕೀಯ ಪ್ರವೇಶ ಕುರಿತು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದು ಹೀಗೆ...
ಫೈಲ್ ಚಿತ್ರ
ಮೈಸೂರು: ಪುತ್ರ ಅಭಿಷೇಕ್ ಅಂಬರೀಶ್ ಅವರ ರಾಜಕೀಯ ಪ್ರವೇಶ ಕುರಿತು ಮಂಡ್ಯ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಈ ವಿಚಾರವನ್ನು ಅಭಿಷೇಕ್ ಅವರನ್ನೇ ಕೇಳಬೇಕು. ಅಭಿಷೇಕ್ ನನಗೆ ಏನೂ ಹೇಳುವುದಿಲ್ಲ. ಸಿನೆಮಾ ವಿಚಾರದಲ್ಲೂ ಕೂಡ ಅಷ್ಟೇ ಆತ ನನ್ನ ಜೊತೆ ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ನಾನು ರಾಜ್ಯ ರಾಜಕಾರಣಕ್ಕೆ ಸದಯಕ್ಕೆ ಬರುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷದ ಚಿಹ್ನೆಯಡಿಯಲ್ಲಿ ಸ್ಪರ್ಧಿಸ ಬೇಕೆಂಬ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಯೋಚನೆ ಮಾಡುತ್ತೇನೆ ಎಂದರು.
ಇನ್ನು ಮಂಡ್ಯದಲ್ಲಿ ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಒಳ್ಳೆಯ ಅಭ್ಯರ್ಥಿಗಳನ್ನು ಬೆಂಬಲಿಸುವೆ ಎಂದು ತಿಳಿಸಿದ್ದಾರೆ.
Next Story