ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ: ಸಿದ್ದರಾಮಯ್ಯ
ಕೋಲಾರ: 'ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ. ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಆದರೆ ನಾನು ಎಲ್ಲಿ ನಿಲ್ಲಬೇಕು ಎಂದು ಇನ್ನೂ ನಿರ್ಧರಿಸಿಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನ ನನ್ನನ್ನು ತಿರಸ್ಕರಿಸಿದ್ದು, ಮತ್ತೆ ಅಲ್ಲಿಂದ ಸ್ಪರ್ಧಿಸುವುದಿಲ್ಲ. ಹುಣಸೂರು, ಕೊಪ್ಪಳ, ಹೆಬ್ಬಾಳ, ಚಾಮರಾಜಪೇಟೆ, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಅಂತಿಮ ತೀರ್ಮಾನ ಮಾಡಿಲ್ಲ' ಎಂದು ಹೇಳಿದರು.
'ಜಿ.ಟಿ.ದೇವೆಗೌಡ ನನ್ನ ಜತೆ ಮಾತಾಡಿದ್ದಾರೆ. ಅವರು ಮತ್ತು ಅವರ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೇಳಿದ್ದಾರೆ. ನಾನು ಇನ್ನೂ ಹೈಕಮಾಂಡ್ ಜತೆ ಈ ವಿಚಾರ ಮಾತನಾಡಿಲ್ಲ' ಎಂದು ತಿಳಿಸಿದರು.
Next Story