ಪಾವಗಡ ಬಸ್ ಅಪಘಾತ ಪ್ರಕರಣ: ತನಿಖೆಗೆ ಅದೇಶ
ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ಸಮೀಪ ಬಸ್ ಅಪಘಾತದಲ್ಲಿ 5 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ತನಿಖೆಗೆ ಆದೇಶಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ''ತಾಲೂಕಿನ ಪಳವಳ್ಳಿ ಕಟ್ಟೆಯ ಘಟನೆ ಅತ್ಯಂತ ದುರಾದೃಷ್ಟಕರ. ಈ ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ಘಟನೆ ಕುರಿತು ಈಗಾಗಲೇ ತನಿಖೆಗೆ ಅದೇಶಿದ್ದೇನೆ. ನಮ್ಮ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ'' ಎಂದು ತಿಳಿಸಿದ್ದಾರೆ.
''ಪರ್ಮಿಟ್ ವಯಲೇಶನ್ (Permit Violation), ಫಿಟ್ನೆಸ್ (fitness) ಸೇರಿದಂತೆ ಇತರೆ ವಿಷಯಗಳ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು'' ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಾವಗಡ: ಖಾಸಗಿ ಬಸ್ ಪಲ್ಟಿ; 5 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ
ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಘಟನೆ ಅತ್ಯಂತ ದುರಾದೃಷ್ಟಕರ. ಈ ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ಘಟನೆ ಕುರಿತು ಈಗಾಗಲೇ ತನಿಖೆಗೆ ಅದೇಶಿದ್ದೇನೆ.
— B Sriramulu (@sriramulubjp) March 19, 2022
ನಮ್ಮ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. 1/2