'ಕುಮಾರಸ್ವಾಮಿ ಗಾಳಿಪಟದಂತೆ, ಸ್ವಂತಿಕೆಯೇ ಇಲ್ಲ': ವ್ಯಂಗ್ಯವಾಡಿದ ಬಿಜೆಪಿ
ಬೆಗಳೂರು: 'ಎಚ್ಡಿಕೆ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.
ಬಿಜೆಪಿ ಟ್ವೀಟ್ ಇಂತಿದೆ...
''ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ. ನಿಮ್ಮಂತವರ ಯೂಟರ್ನ್ ನೀತಿಗಾಗಿಯೇ ಕಗ್ಗದಲ್ಲಿ ಸಾಲೊಂದು ರಚಿತವಾಗಿದೆ... ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ? ಮೀನು ನೀರೊಳು ನುಸುಳೆ ಪಥನಿಯಮವಿಹುದೆ? ಏನೊ ಜೀವನವನೆಳೆವುದೇನೊ ನೂಕುವುದದನು । ನೀನೊಂದು ಗಾಳಿಪಟ – ಮಂಕುತಿಮ್ಮ।। ಎಚ್ಡಿಕೆ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ''.
''ಕರ್ನಾಟಕದ ರಾಜಕಾರಣದಲ್ಲಿ ಎಚ್ಡಿಕೆ ಅವರಂತಹ ಗಾಳಿಪಟದ ವ್ಯಕ್ತಿತ್ವ ಹೊಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ. ಆವ ಕಡೆ ಹಾರುವುದೋ! ಆವ ಕಡೆ ತಿರುಗುವುದೋ? ಆವಾಗಳಾವ ಕಡೆಗೆರಗುವುದೋ ಹಕ್ಕಿ! ಎಂಬಂತಿದೆ ಎಚ್ಡಿಕೆ ರಾಜಕೀಯ ಧೋರಣೆ. ಸ್ವಂತಿಕೆ ಇಲ್ಲದವರು ವಾಜಪೇಯಿ ಅವರಂಥವರನ್ನೂ ಟೀಕಿಸುವುದು ಚೋದ್ಯವಲ್ಲದೆ ಮತ್ತೇನು?''
''ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು । ಕಡುಬ ನುಂಗುವುದು, ಕಹಿಮದ್ದ ಕುಡಿಯುವುದು ॥ ದುಡುಕಿ ಮತಿದಪ್ಪುವುದು, ತಪ್ಪನೊಪ್ಪೆನ್ನುವುದು | ಮಾಜಿ #LuckyDipCMHDK ಅವರಿಗೆ ಇದೇ ಬದುಕು ತಾನೇ?'' ಎಂದು ಬಿಜೆಪಿ ಪ್ರಶ್ನಸಿದೆ.
ಇದನ್ನೂ ಓದಿ... ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್: ಬೆಲೆ ಏರಿಕೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ?
— BJP Karnataka (@BJP4Karnataka) April 4, 2022
ಮೀನು ನೀರೊಳು ನುಸುಳೆ ಪಥನಿಯಮವಿಹುದೆ?
ಏನೊ ಜೀವನವನೆಳೆವುದೇನೊ ನೂಕುವುದದನು ।
ನೀನೊಂದು ಗಾಳಿಪಟ – ಮಂಕುತಿಮ್ಮ।।
ಎಚ್ಡಿಕೆ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ.#ಗಾಳಿಪಟಎಚ್ಡಿಕೆ