ಉಸಿರು ಇರೋವರೆಗೂ ಮುಸ್ಲಿಮ್ ಸಮುದಾಯಕ್ಕೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ
ಬಳ್ಳಾರಿ : ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸ್ಲಿಮ್ ಸಮುದಾಯಕ್ಕೆ ದ್ರೋಹ ಮಾಡಲ್ಲ. ಒಂದು ವೇಳೆ ದ್ರೋಹವಾದ್ರೆ ನಾನು ಅವತ್ತೇ ರಾಜಕೀಯದಿಂದ ಹೊರ ಹೋಗುತ್ತೇನೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
ನಗರದ ಕೌಲಬಝಾರ್ನ ಎಂ.ಆರ್. ಫಂಕ್ಷನ್ ಹಾಲ್ನಲ್ಲಿ ಶಾಸಕರ ಆಪ್ತರೊಬ್ಬರು ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು.
ಇದನ್ನೂ ಓದಿ... ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮುಖಂಡನಿಂದಲೇ ಪ್ರಧಾನಿ ಕಚೇರಿಗೆ ದೂರು!
ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು ಬಿಡುತ್ತೇನೆ, ನಮಗೂ ನಿಮಗೂ ಇರುವ ಸಂಬಂಧವೇ ಬೇರೆ ಇದೆ. ನನ್ನ ಮನಸ್ಸಿನಲ್ಲಿ ಏನೂ ಇರಲ್ಲ ಮುಸ್ಲಿಂ ಸಮುದಾಯಕ್ಕೆ ಸದಾ ಸಹಕಾರ, ಪ್ರೀತಿ ಇರುತ್ತೆ ಎಂದು ಹೇಳಿದ್ದಾರೆ.
ಈ ಹಿಂದೆ ಸೋಮಶೇಖರ್ ರೆಡ್ಡಿ ಅವರು ಮುಸ್ಲಿಮ್ ವಿರೋಧಿ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು.
Next Story