VIDEO-ಯಡಿಯೂರಪ್ಪ, ಡಿಕೆಶಿ, ಎಚ್ಡಿಕೆ, ಸಿದ್ದರಾಮಯ್ಯ ದಿನ ರಾತ್ರಿ ಮಾತಾಡ್ತಾರೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
''ರಾಜ್ಯದಲ್ಲಿ ಎಲ್ಲ ಪಾರ್ಟಿಯದ್ದು ಅಡ್ಜಸ್ಟ್ ಮೆಂಟ್ ರಾಜಕಾರಣ''
ಬೆಳಗಾವಿ : ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿ ಅವರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಗೋಕಾಕ್ ನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರೇ ಅಧಿಕಾರದಲ್ಲಿದ್ದರೂ ಪರಸ್ಪರ ಒಲವು ತೋರುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ರಾಜಕೀಯ ನಡೆಯುತ್ತಿದ್ದು, ಬಿಜೆಪಿಯ ಮಹಾನ್ ನಾಯಕರು, ಕಾಂಗ್ರೆಸ್ ನ ಡಿ ಕೆ ಶಿವಕುಮಾರ್, ಜೆಡಿಎಸ್ ನ ಕುಮಾರಸ್ವಾಮಿ ಮಧ್ಯೆ ಹೊಂದಾಣಿಕೆಯ ರಾಜಕೀಯ ಇದೆ. ರಾತ್ರಿ ಹೊತ್ತು ಈ ಎಲ್ಲ ನಾಯಕರು ಒಟ್ಟಿಗೆ ಮಾತನಾಡಿಕೊಳ್ಳುತ್ತಾರೆ, ಶಾಸಕರು ಹುಚ್ಚು ನಾಯಿಗಳು ಸರ್ ಸರ್ ಅಂತ ಅವರ ಹಿಂದೆ ಹೋಗುತ್ತಾರಷ್ಟೆ ಎಂದರು.
Next Story