ಕೋವಿಡ್ ಸಂಬಂಧಿತ ಸಾವುಗಳ ಕುರಿತ ಅಪಪ್ರಚಾರಗಳಿಗೆ ಕಿವಿಗೊಡಬೇಡಿ: ಆರೋಗ್ಯ ಸಚಿವ ಕೆ. ಸುಧಾಕರ್
ಆರೋಗ್ಯ ಸಚಿವ ಕೆ. ಸುಧಾಕರ್
ಬೆಂಗಳೂರು: 'ಕರ್ನಾಟಕದಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ. ಅಪಪ್ರಚಾರಗಳಿಗೆ ಜನ ಕಿವಿಗೊಡುವುದು ಬೇಡ' ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಹೇಳಿದ್ದಾರೆ.
ಶುಕ್ರವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ' ಕರ್ನಾಟಕದಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ. ಕೊರೋನ ಅಂಕಿ-ಅಂಶ ದಾಖಲಿಸಲು ರಾಜ್ಯದಲ್ಲಿ ಪಾರದರ್ಶಕ ವ್ಯವಸ್ಥೆ ಪಾಲಿಸಲಾಗಿದ್ದು ಈವರೆಗೂ 40,060 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಅಧಿಕೃತ ದಾಖಲಾತಿ ಇದೆ. ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ' ಎಂದು ತಿಳಿಸಿದ್ದಾರೆ.
2020 ಮತ್ತು 2021ರಲ್ಲಿ ಭಾರತದಲ್ಲಿ 4.7 ಮಿಲಿಯನ್ ಗೂ ಅಧಿಕ ಸಾವು ಸಂಭವಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಗುರುವಾರ ಅಂದಾಜು ಮಾಡಿದೆ.
ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ.
— Dr Sudhakar K (@mla_sudhakar) May 6, 2022
ಕೊರೊನಾ ಅಂಕಿ-ಅಂಶ ದಾಖಲಿಸಲು ರಾಜ್ಯದಲ್ಲಿ ಪಾರದರ್ಶಕ ವ್ಯವಸ್ಥೆ ಪಾಲಿಸಲಾಗಿದ್ದು ಈವರೆಗೂ 40,060 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಅಧಿಕೃತ ದಾಖಲಾತಿ ಇದೆ.
ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ.