ಕಾಳಿ ಸ್ವಾಮಿ, ಮುತಾಲಿಕ್ ಮಂಡ್ಯ ಜಿಲ್ಲೆ ಪ್ರವೇಶ ನಿರ್ಬಂಧಕ್ಕೆ ಒತ್ತಾಯ
ಮಂಡ್ಯ, ಮೇ 16: ಜಿಲ್ಲೆಯ ಶಾಂತಿ, ಸಾಮರಸ್ಯ, ಕೋಮುಸೌರ್ದತೆಯನ್ನು ಕದಡುವುದರ ಮೂಲಕ ಇಲ್ಲಿನ ಸಾಮಾಜಿಕ ಬದುಕನ್ನು ಅಶಾಂತಿಯತ್ತ ದೂಡಲು ಪ್ರಯತ್ನಿಸುತ್ತಿರುವ ಋಷಿಕುಮಾರ್ ಸ್ವಾಮಿ ಮತ್ತು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರಂತಹ ವ್ಯಕ್ತಿಗಳಿಗೆ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಲು ಒತ್ತಾಯಿಸಿ ನಾಳೆ(ಮೇ 17) ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಲಾಗುತ್ತಿದೆ ಸಲ್ಲಿಸಲಾಗುತ್ತಿದೆ ಎಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿ, ಆನಂತರ ಅಲ್ಲಿಂದ ಹೊರಟು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲೆಯ ಎಲ್ಲಾ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಸಾಹಿತಿಗಳು, ಕಲಾವಿದರು, ಲೇಖಕರು ಹಾಗೂ ಪ್ರಗತಿಪರ ಚಿಂತಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲೆಯ ಶಾಂತಿ, ಸಾಮರಸ್ಯದ ಬದುಕಿನ ಉಳಿವಿಗಾಗಿ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.