ಚೆನ್ನಶೆಟ್ಟಿಕೊಪ್ಪ: ಶ್ರೀ ಈಶ್ವರ ಬಸವಣ್ಣ ದೇವಸ್ಥಾನದ ಹುಂಡಿ ಕಳ್ಳತನ
ಸಾಗರ, ಮೇ 18: ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ಶ್ರೀ ಈಶ್ವರ ಬಸವಣ್ಣ ದೇವಸ್ಥಾನದ ಹುಂಡಿ ಕಳ್ಳತನ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕಳ್ಳರು ದೇವಸ್ಥಾನದ ಬಾಗಿಲು ಒಡೆದು ಹುಂಡಿಯಲ್ಲಿದ್ದ ಸುಮಾರು 15 ಸಾವಿರ ರೂ. ನಗದು ಇತ್ತು ಎಂದು ಅಂದಾಜಿಸಲಾಗಿದೆ.
ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story