ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ ಬೊಮ್ಮಾಯಿ
"18 ದೇಶಗಳ ಉದ್ಯೋಗ ತಜ್ಞರೊಂದಿಗೆ ಮಾತುಕತೆ "
ಬೆಂಗಳೂರು: ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮೂರು ದಿನಗಳ ಕಾಲ ಮುಖ್ಯ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಪರಿಸರ ಮತ್ತು ಆರ್ಥಿಕತೆ ಕುರಿತು ಎರಡು ಅಧಿವೇಶಗಳಲ್ಲಿ ಭಾಗವಹಿಸುತ್ತಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ದಾವೋಸ್ ಪ್ರವಾಸದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು.
ಐ.ಟಿ ಬಿಟಿ ಸಚಿವರು, ಕೈಗಾರಿಕಾ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಶೃಂಗ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ 18 ವಿವಿಧ ದೇಶಗಳ ಉದ್ಯೋಗ ತಜ್ಞರೊಂದಿಗೆ ಮಾತುಕತೆ ನಡೆಸಲು ಸಮಯ ನಿಗದಿಯಾಗಿದೆ. ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ನಡೆಯಲಿರುವುದರಿಂದ ಮಾತುಕತೆ ಉಪಯುಕ್ತವಾಗಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
Next Story