ಡಿಕೆಶಿ, ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ದಿಲ್ಲಿಯವರೆಗೂ ಕೇಳಿಸುತ್ತಿದೆ: ಬಿಜೆಪಿ ವ್ಯಂಗ್ಯ
ಫೈಲ್ ಚಿತ್ರ
ಬೆಂಗಳೂರು: 'ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲೆಲ್ಲಾ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು. ಈಗ ಅದರ ಸದ್ದು, ದೆಹಲಿವರೆಗೂ ಕೇಳಿಸುತ್ತಿದೆ. ಕೈ ಕಮಾಂಡ್ ತೇಪೆ ಹಚ್ಚುವ ವ್ಯರ್ಥ ಪ್ರಯತ್ನ ಮಾಡುತ್ತಿದೆ. ಇವರ ಒಳಜಗಳದಿಂದಲೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ' ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 'ಮೇಕೆದಾಟು ಪಾದಯಾತ್ರೆಯಲ್ಲಿ, ಬೆಂಗಳೂರಿನ ರಸ್ತೆಗಳಲ್ಲಿ ರಾಜಸ್ಥಾನದ ಚಿಂತನಾ ಶಿಬಿರದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಒಟ್ಟಿಗೆ ನಿಂತು ಎಷ್ಟೇ ಫೋಟೋಶೂಟ್ ಮಾಡಿಸಿಕೊಂಡರೂ, ಒಳ ಬೇಗುದಿ ಶಮನವಾಗುವುದೇ?'' ಎಂದು ಪ್ರಶ್ನಿಸಿದೆ.
''ಕೈ ಹಿಡಿತಕ್ಕಾಗಿ ಕೈ ನಾಯಕರು ಕೈ ಪಾಳಯದಲ್ಲಿ ಕೈ ಕೈ ಮಿಲಾಯಿಸುತ್ತಾರೆ ಆದರೆ, 2023 ಚುನಾವಣೆಯ ನಂತರ ಕಾಂಗ್ರೆಸ್ ಖಾಲಿ ಖಾಲಿ! '' ಎಂದು ಲೇವಡಿ ಮಾಡಿದೆ.
ಒಡೆದ ಮನೆ @INCKarnataka ಪಕ್ಷದಲ್ಲಿ ಮೊದಲೆಲ್ಲಾ @DKShivakumar ಹಾಗೂ @siddaramaiah ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು.
— BJP Karnataka (@BJP4Karnataka) May 23, 2022
ಈಗ ಅದರ ಸದ್ದು, ದೆಹಲಿವರೆಗೂ ಕೇಳಿಸುತ್ತಿದೆ. ಕೈ ಕಮಾಂಡ್ ತೇಪೆ ಹಚ್ಚುವ ವ್ಯರ್ಥ ಪ್ರಯತ್ನ ಮಾಡುತ್ತಿದೆ.
ಇವರ ಒಳಜಗಳದಿಂದಲೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ.#SidduVsDKS