ಕೊಡಗು: ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡ 6 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಸಿದ್ದಾಪುರ (ಕೊಡಗು) : ವಾಹನದಿಂದ ದ್ರವ ಸೋರಿಕೆಯಾದ ಪರಿಣಾಮ ಖಾಸಗಿ ಶಾಲೆಯ ಆರು ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ರಸ್ತೆಯಲ್ಲಿ ದ್ರವ ಸೋರಿಕೆಯಾದ ಪರಿಣಾಮ ಅದರ ಘಾಟ್ ನಿಂದಾಗಿ ಸಿದ್ದಾಪುರ ವಿರಾಜಪೇಟೆ ರಸ್ತೆ ಸಮೀಪ ಇರುವ ಸಂತ ಅನ್ನಮ್ಮ ಶಾಲೆಯ ಆರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ವಿದ್ಯಾರ್ಥಿಗಳಿಗೆ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ಸಮಸ್ಯೆ ಎದುರಾಗಿರುವ ವಿದ್ಯಾರ್ಥಿಗಳಿಗೆ ಆಕ್ಸಿಜನ್ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋರಿಕೆಯಾಗಿರುವುದು ಯಾವುದೇ ಕೆಮಿಕಲ್ ಅಲ್ಲ, ಪೆಪ್ಪರ್ ಸಾಸ್ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story