Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡದ ಮಕ್ಕಳಿಗೆ ವಿಷ ಉಣಿಸುವುದನ್ನು...

ಕನ್ನಡದ ಮಕ್ಕಳಿಗೆ ವಿಷ ಉಣಿಸುವುದನ್ನು ಕೂಡಲೇ ನಿಲ್ಲಿಸಬೇಕು: ಕರವೇ ಅಧ್ಯಕ್ಷ ನಾರಾಯಣಗೌಡ

ಪಠ್ಯಪರಿಷ್ಕರಣೆ ವಿವಾದ

ವಾರ್ತಾಭಾರತಿವಾರ್ತಾಭಾರತಿ25 May 2022 10:00 PM IST
share
ಕನ್ನಡದ ಮಕ್ಕಳಿಗೆ ವಿಷ ಉಣಿಸುವುದನ್ನು ಕೂಡಲೇ ನಿಲ್ಲಿಸಬೇಕು: ಕರವೇ ಅಧ್ಯಕ್ಷ ನಾರಾಯಣಗೌಡ

ಬೆಂಗಳೂರು, ಮೇ 25: 'ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿಯ ಸಮರ್ಥನೆಗಾಗಿ ಸುಳ್ಳುಗಳನ್ನು ಹೇಳಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಲುವು ಖಂಡನಾರ್ಹವಾಗಿದ್ದು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಹಾಗೆಯೇ ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿಯನ್ನು ಕೂಡಲೇ ವಿಸರ್ಜಿಸಬೇಕು. ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿ ಮಾಡಿರುವ ಎಲ್ಲ ಬದಲಾವಣೆಗಳನ್ನೂ ಕೂಡಲೇ ನಿಲ್ಲಿಸಬೇಕು. ಕನ್ನಡದ ಮಕ್ಕಳಿಗೆ ವಿಷ ಉಣಿಸುವುದನ್ನು ಕೂಡಲೇ ನಿಲ್ಲಿಸಬೇಕು' ಎಂದು ಕರ್ನಾಟಕ ರಕ್ಷಣ ವೇದಿಕೆ(ಕರವೇ)ಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಕಿಡಿಕಾರಿದ್ದಾರೆ.   

ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ಈ ಕೂಡಲೇ ಬರಗೂರು ರಾಮಚಂದ್ರಪ್ಪ, ದೇವನೂರ ಮಹಾದೇವ ಅವರು ಸೇರಿದಂತೆ ಸಾಹಿತಿಗಳು, ಶಿಕ್ಷಣ ತಜ್ಞರ ಸಭೆ ನಡೆಸಬೇಕು. ಪಠ್ಯಪುಸ್ತಕ ವಿವಾದವನ್ನು ಬಗೆಹರಿಸಬೇಕು. ನಾಡದ್ರೋಹಿಯ ಅಧ್ಯಕ್ಷತೆಯಲ್ಲಿ ರಚಿಸಲಾದ ಪಠ್ಯಪರಿಷ್ಕರಣೆಯ ಪುನರ್ ಪರಿಶೀಲನಾ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾಷಾ ಅಭಿಮಾನ, ಪ್ರಾದೇಶಿಕವಾದ ದೇಶ ಎದುರಿಸುತ್ತಿರುವ ಸಮಸ್ಯೆಗಳು, ರಾಷ್ಟ್ರವಾದಕ್ಕೆ ಇವು ಕಂಟಕ ಎಂದು ಪಠ್ಯಪುಸ್ತಕದಲ್ಲಿ ಸೇರಿಸಲಾಗಿದೆ ಎಂದು ವರದಿಯಾಗಿದೆ. ನಾಡದ್ರೋಹಿಗಳು ಮಾತ್ರ ಇಂತಹ ವಾದ ಮಾಡುತ್ತಾರೆ. ಕನ್ನಡತನ ಎಂಬುದು ಭಾರತೀಯತೆಗೆ ಪೂರಕವೇ ಹೊರತು ಮಾರಕವಲ್ಲ ಎಂದು ಉಲ್ಲೇಖಿಸಿದ್ದಾರೆ.

ತನ್ನ ನಾಡನ್ನು, ನಾಡನುಡಿಯನ್ನು ಪ್ರೀತಿಸುವುದು ಹೇಗೆ ರಾಷ್ಟ್ರದ್ರೋಹ ಆಗುತ್ತದೆ? ಮಕ್ಕಳಿಗೆ ಇಂಥ ಪಾಠವನ್ನು ಕಲಿಸಿದರೆ ಅವರು ನಾಡದ್ರೋಹಿಗಳಾಗಿ ಬೆಳೆಯುವುದಿಲ್ಲವೇ? ಭಾಷಾಭಿಮಾನ ರಾಷ್ಟ್ರೀಯತೆ ಶತ್ರು ಎಂದು ಹೇಳುವ ಪಠ್ಯವನ್ನು ಕನ್ನಡಿಗರು ಯಾಕೆ, ಹೇಗೆ ಸಹಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ ಅವರು, ಪ್ರಾದೇಶಿಕವಾದವು ದೇಶದ ಸಮಸ್ಯೆ ಎಂದು ಬಿಂಬಿಸಿರುವ ಪಾಠವನ್ನು ಈ ಕೂಡಲೇ ಕಿತ್ತುಹಾಕಬೇಕು. ರಾಮಮೂರ್ತಿ, ಅ.ನ.ಕೃಷ್ಣರಾಯರು, ಡಾ.ರಾಜಕುಮಾರ್ ಸೇರಿದಂತೆ ಕನ್ನಡ ಚಳವಳಿ ಕಟ್ಟಿಬೆಳೆಸಿದ ಸಾವಿರಾರು ಮಹಾನಾಯಕರಿಗೆ ಮಾಡುತ್ತಿರುವ ಅವಮಾನ ಇದಾಗುತ್ತದೆ ಎಂದರು.

ನಾನು ಎಡ, ಬಲ ಯಾವ ಪಂಥಕ್ಕೂ ಸೇರಿದವನಲ್ಲ. ನಾನು ರಾಷ್ಟ್ರಕವಿ ಕುವೆಂಪು ಅವರು ಹೇಳಿದ ಮನುಷ್ಯಪಂಥಕ್ಕೆ ಸೇರಿದವನು. ಪಠ್ಯಪುಸ್ತಕ ಬದಲಾವಣೆ ಹೆಸರಿನಲ್ಲಿ ಆಗುತ್ತಿರುವ ಅಪಾಯಕಾರಿ ಬೆಳವಣಿಗೆಗಳು ತಿಳಿದಿದ್ದು, ಕನ್ನಡ ಸಾಹಿತಿಗಳ ಬೆನ್ನಿಗೆ ನಾವು ನಿಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನು ಎಡ, ಬಲ ಯಾವ ಪಂಥಕ್ಕೂ ಸೇರಿದವನಲ್ಲ. ನಾನು ರಾಷ್ಟ್ರಕವಿ ಕುವೆಂಪು ಅವರು ಹೇಳಿದ ಮನುಷ್ಯಪಂಥಕ್ಕೆ ಸೇರಿದವನು. ಪಠ್ಯಪುಸ್ತಕ ಬದಲಾವಣೆ ಹೆಸರಿನಲ್ಲಿ ಆಗುತ್ತಿರುವ ಅಪಾಯಕಾರಿ ಬೆಳವಣಿಗೆಗಳು ನನಗೆ ಗೊತ್ತಿದೆ. ಕನ್ನಡ ಸಾಹಿತಿಗಳ ಬೆನ್ನಿಗೆ ನಾವು ನಿಲ್ಲುತ್ತೇವೆ.@BSBommai @BCNagesh_bjp #DismissLyingMinister #BCNageshExposed

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) May 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X