ಕಲಬುರಗಿ: ದಲಿತ ಯುವಕನ ಹತ್ಯೆ; ಇಬ್ಬರು ಆರೋಪಿಗಳ ಬಂಧನ
ವಿಜಯಕುಮಾರ್ ಕಾಂಬಳೆ- ಹತ್ಯೆಗೀಡಾದ ಯುವಕ
ಕಲಬುರಗಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಯುವಕ ವಿಜಯಕುಮಾರ್ ಕಾಂಬಳೆ (25) ಹತ್ಯೆ ಮಾಡಿದ ಆರೋಪದ ಮೇರೆಗೆ ವಾಡಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ವಾಡಿ ಪಟ್ಟಣದ ನವಾಝ್ ಮತ್ತು ಮುಹಮ್ಮದ್ ಶಹಾಬುದ್ದೀನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಪ್ರಕರಣದ ವಿವಿರ: ವಿಜಯಕುಮಾರ್ ಹಾಗೂ ಶಹಾಬುದ್ದೀನ್ನ ತಂಗಿ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ಬಗ್ಗೆ ಶಹಾಬುದ್ದೀನ್ ತಕರಾರು ತೆಗೆದು ಈ ಹಿಂದೆ ವಿಜಯಕುಮಾರ್ ಮೇಲೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಆ ನಂತರವೂ ಮೊಬೈಲ್ನಲ್ಲಿ ಮೆಸೇಜ್ ಮಾಡುವುದು ಹಾಗೂ ಭೇಟಿಯಾಗುವುದನ್ನು ಮುಂದುವರಿಸಿದ್ದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತ ನವಾಝ್ ನೊಂದಿಗೆ ಸೇರಿಕೊಂಡು ಕೊಲೆ ಮಾಡಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story