ಜನರ ಹಕ್ಕುಗಳ ಬಗ್ಗೆ ಧ್ವನಿಯೆತ್ತುವವರ ವಿರುದ್ಧ ದೇಶದ್ರೋಹದ ಆರೋಪ: ನ್ಯಾ. ಚಂದ್ರು ವಿಷಾದ
-

photo -twitter
ದಾವಣಗೆರೆ: ನೊಂದವರಿಗೆ ನ್ಯಾಯಾಂಗದಿಂದ ನ್ಯಾಯ ಸಿಗಬಹುದೆಂಬ ಕೊನೆಯಾಸೆ ಜನಸಾಮಾನ್ಯರದಾಗಿತ್ತು. ಆದರೆ, ಈಗ ಅದು ಸಹ ಕಳೆದು ಹೋಗಿದೆ ಎಂದು ಮದರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ಬೇಸರ ವ್ಯಕ್ತಪಡಿಸಿದರು.
ನಗರದ ತಾಜ್ ಪ್ಯಾಲೇಸ್ನಲ್ಲಿ ಗದಗದ ಲಡಾಯಿ ಪ್ರಕಾಶನ, ಕವಲಕ್ಕಿಯ ಕವಿ ಪ್ರಕಾಶನ, ಧಾರವಾಡದ ಚಿತ್ತಾರ ಕಲಾ ಬಳಗ ಹಾಗೂ ದಾವಣಗೆರೆಯ ಮೇ ಸಾಹಿತ್ಯ ಮೇಳ ಬಳಗ ಸಂಯುಕ್ತಾಶ್ರಯಲ್ಲಿ ಶುಕ್ರವಾರದಿಂದ `ಸ್ವಾತಂತ್ರ್ಯ-75: ನೆಲದ ದನಿಗಳು ಗಳಿಸಿದ್ದೇನು? ಕಳಕೊಂಡಿದ್ದೇನು?' ಎಂಬ ಶೀರ್ಷಿಕೆಯಡಿ ಏರ್ಪಡಿಸಿರುವ 8ನೇ ಮೇ ಸಾಹಿತ್ಯ ಮೇಳದಲ್ಲಿ ಅವರು ದಿಕ್ಸೂಚಿ ಮಾತುಗಳನ್ನಾಡಿದರು.
ಕೋರ್ಟುಗಳಿಗೆ ಜನರ ಪರವಾಗಿ ಮಧ್ಯಪ್ರವೇಶಿಸಲು ಸೆಕ್ಷನ್ 227, 334 ಸೇರಿದಂತೆ ಅನೇಕ ಕಾಯ್ದೆಗಳಿವೆ. ಆದರೆ, ಅದನ್ನು ಬಳಸಲು ತಯಾರಿಲ್ಲ. ಮಾನವ ಹಕ್ಕುಗಳ ರಕ್ಷಣೆಗೆ ಬರಬೇಕಾದ ಕೋರ್ಟುಗಳು ಏನು ಮಾಡುತ್ತಿವೆ? ಎಂದು ಪ್ರಶ್ನಿಸಿದ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಪಾದಿಸಿದ ನರೇಂದ್ರ ಧಾಬೋಲ್ಕರ್, ಗೋವಿಂದ್ ಪನ್ಸಾರೆ, ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರನ್ನು ಕೊಂದ ಆರೋಪಿಗಳನ್ನು ದೇಶದ ನ್ಯಾಯ ವ್ಯವಸ್ಥೆಗೆ ಕಟಕಟೆಗೆ ತಂದುನಿಲ್ಲಿಸಲಾಗಿಲ್ಲ ಎಂದು ವಿಷಾದಿಸಿದರು.
ಪ್ರಸ್ತುತ ದೇಶದ್ರೋಹದ ಕಾನೂನು ದುರುಪಯೋಗ ಆಗುತ್ತಿದೆ. ಜನರ ಹಕ್ಕುಗಳ ಬಗ್ಗೆ ಮಾತನಾಡುವವರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗುತ್ತಿದೆ. ಈಗ ಕರ್ನಾಟಕವು ಒಂದು ಪ್ರಯೋಗಶಾಲೆಯಾಗಿದೆ ಎಂದು ಆರೋಪಿಸಿದರು.
ಪ್ರಾಸ್ತಾವಿಕ ಮಾತನಾಡಿದ ಬಿ.ಶ್ರೀನಿವಾಸ್, ಇಂದಿನಿಂದ ಆರಂಭವಾಗಿರುವ ಮೇ ಸಾಹಿತ್ಯ ಮೇಳವು ದಲಿತರ, ದಮನಿತರ ಧ್ವನಿಯಾಗಿದೆ. ನಮಗೆ ನಾಳೆಯೇ ಬದಲಾವಣೆ ಮಾಡುತ್ತೇವೆ ಎಂಬ ಭ್ರಮೆ ಇಲ್ಲ. ಕೋಮುವಾದದ ಕತ್ತಲೆಯನ್ನು ಓಡಿಸುವ ಮಿಣಿಕು ದೀಪವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಪಿ.ಸಾಯಿನಾಥ್, ದೆಹಲಿಯ ಹೋರಾಟಗಾರ್ತಿ ಕವಿತಾ ಕೃಷ್ಣನ್, ಮಂಗಳೂರಿನ ಪತ್ರಕರ್ತ ಅಬ್ದುಸ್ಸಲಾಂ ಪುತ್ತಿಗೆ ದಿಕ್ಸೂಚಿ ಮಾತುಗಳನ್ನಾಡಿದರು. ಡಾ.ಎಂ.ಜಿ. ಈಶ್ವರಪ್ಪ, ಐವನ್ ಡಿಸಿಲ್ವಾ, ಡಿ.ಬಿ ರಜಿಯಾ, ಅಶೋಕ್ ಬರಗುಂಡಿ, ಎಲ್.ಎಚ್. ಅರುಣಕುಮಾರ್ ಉಪಸ್ಥಿತರಿದ್ದರು. ಎಚ್.ಎಸ್. ಅನುಪಮಾ ನಿರೂಪಿಸಿದರು. ಇಪ್ಟಾ ಕಲಾವಿದರು ಮತ್ತು ದಲಿತ ಕಲಾ ಮಂಡಳಿ ಕಲಾವಿದರು ಹೋರಾಟದ ಹಾಡುಗಳನ್ನು ಹಾಡಿದರು.
---------------------------
ನಾಗಪುರದಿಂದ ಆಮದು ಮಾಡಿಕೊಂಡ ಜನರು ಎಲ್ಲ ಕಡೆಯೂ ಕೂತಿದ್ದು, ಅದರ ಪರಿಣಾಮವನ್ನು ನಾವು ಈಗ ಎಲ್ಲ ಕಡೆಯು ಎದುರಿಸುತ್ತಿದ್ದೇವೆ. ಬಿಜೆಪಿ ಮತ್ತು ಸಂಘಪರಿವಾರದ ಮೊದಲ ಅಜೆಂಡಾ ಶಿಕ್ಷಣದ ಮೇಲೆ ನಿಯಂತ್ರಣ ಸಾಧಿಸುವುದಾಗಿದೆ. ಹೀಗಾಗಿಯೇ, ಶಿಕ್ಷಣದ ಕೇಸರೀಕರಣಕ್ಕೆ ಮುಂದಾಗಿದ್ದು, ಈ ಕಾರಣಕ್ಕಾಗಿಯೇ ಭಗತ್ಸಿಂಗ್, ಪೆರಿಯಾರ್ ಮತ್ತಿತರರನ್ನು ಪಠ್ಯದಿಂದ ಹೊರಗೆ ಇಡಲಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಆರೋಪಿಸಿದರು.
ಸಮಸ್ಯೆಯೇ ಅಲ್ಲದ ಹಲಾಲ್, ಹಿಜಾಬ್, ಆಜಾನ್ಗಳನ್ನು ಮುನ್ನೆಲೆಗೆ ತಂದು ಸಾಮರಸ್ಯವನ್ನು ಹಾಳುಗೆಡವಲಾಗುತ್ತಿದೆ. ಸಮವಸ್ತ್ರದ ಹೆಸರಿನಲ್ಲಿ ಕೆಲ ಸಮುದಾಯದ ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ ನಡೆದಿದೆ. ನಾವು ಈ ದೇಶದಲ್ಲಿ ತನ್ನ ಅಭಿಪ್ರಾಯಗಳನ್ನು ಸ್ವತಂತ್ರವಾಗಿ ಅಭಿವ್ಯಕ್ತಿಸುವ ಪ್ರತಿ ವ್ಯಕ್ತಿಗೂ ಜೈಲಾಗುವ ಸಾಧ್ಯತೆಯ ಬಗ್ಗೆ ಚರ್ಚಿಸಬೇಕಾಗಿದೆ ಎಂದು ಹೇಳಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.