ಯುಪಿಎಸ್ಸಿಯಲ್ಲಿ ದೃಷ್ಟಿದೋಷ ಯುವತಿಯ ಸಾಧನೆ: ಮೈಸೂರಿನ ಮೇಘನಾಗೆ 435ನೇ ರ್ಯಾಂಕ್
ಕೆ.ಟಿ.ಮೇಘನಾ
ಮೈಸೂರು,ಮೇ.30: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ ಪ್ರಸ್ತುತ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಬೆಟ್ಟದಪುರ ಸಮೀಪದ ಕುಡುಕೂರು ಮೂಲದ ಕೆ.ಟಿ.ಮೇಘನಾ 425ನೇ ರ್ಯಾಂಕ್ ಪಡೆದಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಮೂಲದವರಾದ ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿ ಮೇಘನಾ ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದಾರೆ.
ಮೇಘನಾ ಅವರು ಪೂರ್ಣ ಪ್ರಮಾಣದಲ್ಲಿ ದೃಷ್ಟಿ ಸಮಸ್ಯೆ ಎದುರಿಸುತ್ತಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ ಶೇ.70ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು. ಆದರೆ ತಮಗಿರುವ ಈ ವೈಕಲ್ಯವನ್ನು ಮೆಟ್ಟಿ ನಿಂತು ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ... UPSC ಪರೀಕ್ಷೆ: ರಾಜ್ಯದ 27 ಮಂದಿ ಉತ್ತೀರ್ಣ, ವಿವರ ಇಲ್ಲಿದೆ
2020ನೇ ಸಾಲಿನಲ್ಲೂ ಮೇಘನಾ 465ನೇ ರ್ಯಾಂಕ್ ಪಡೆದಿದ್ದರು. ಶಾಲಾ ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್ನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದಿದ್ದರು. ಮಗಳ ಸಾಧನೆ ಬಗ್ಗೆ ಪೋಷಕರು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.