ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಲು ಹೊರಟಿದ್ದಾರೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್
-

ಬೆಂಗಳೂರು, ಮೇ 31: ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೆ ಸೂಕ್ತ ವೇದಿಕೆ ಎಂದು ‘ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೆ ವಿಷಪ್ರಾಸನ ಮಾಡಲು ಹೊರಟಿದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ಶಾಸಕ ಕೆ.ಆರ್.ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರವು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರಿಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ ಎಂದು ರಮೇಶ್ ಕುಮರ್ ತಿಳಿಸಿದ್ದಾರೆ.
ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆ ಪಡತಕ್ಕಂತ ನಮ್ಮ ಹೆಮ್ಮೆಯ ಸಾಕ್ಷಿ ಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡತಕ್ಕಂಥದ್ದು ಅಕ್ಷಮ್ಯ ಅಪರಾಧ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಬರಗೂರುರವರು ಪ್ರಜಾಸತ್ತಾತ್ಮಕವಾದ ಕ್ರಮಗಳನ್ನನುಸರಿಸಿ ಪರಿಷ್ಕರಣೆ ಕೆಲಸಕ್ಕೆ ಅವಕಾಶ ಮಾಡಿಕೊಟ್ಟಿದ್ದರು. 6ನೇ ತರಗತಿಯ ಸಮಾಜ ವಿಜ್ಞಾನದ ‘ಹೊಸ ಧರ್ಮಗಳ ಉದಯ’ ಎಂಬ ಪಾಠ ಕುರಿತು ಉಂಟಾದ ಅಭಿಪ್ರಾಯ ಭೇದವನ್ನು ಸರಿಪಡಿಸುವ ಉದ್ದೇಶದಿಂದ ಪ್ರಾರಂಭವಾದ ಪುನರ್ಪರಿಷ್ಕರಣೆ ಆಲೋಚನೆ ಇಡೀ ಪುಸ್ತಕವನ್ನೆ ಪರಿಷ್ಕರಣೆ ಮಾಡುವುದರಲ್ಲಿ ಸಮಾಪ್ತಿಗೊಳಿಸಲಾಗಿದೆ ಎಂದು ರಮೇಶ್ ಕುಮಾರ್ ಟೀಕಿಸಿದ್ದಾರೆ.
ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೆ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ರವರು ಇದರ ಇಡೀ ಇತಿಹಾಸವನ್ನು ತಮ್ಮ ‘Triumph of Brahmanism’ ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ದಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಬೌದ್ಧಿಕ ಮತ್ತು ನೈತಿಕ ಸಾಮಥ್ರ್ಯ ಇದ್ದವರು ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರಕಾರ ತನ್ನ ಕನಿಷ್ಠ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು. ಪುನರ್ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ ಎಂದು ಅವರು ಹೇಳಿದ್ದಾರೆ.
ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕøತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ ಶೂದ್ರ ಪ್ರಪಂಚದ ಮೌಢ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.
ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೆ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿ ತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೆ ಕೇಶವ್ ಬಲಿರಾಂ ಹೆಡ್ಗೇವಾರ್ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ ಎಂದು ಅವರು ಟೀಕಿಸಿದ್ದಾರೆ.
ಆದುದರಿಂದಲೆ, ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೆ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ, ಪ್ರತಾಪ ಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಪ್ರಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.