ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಮುಳಬಾಗಿಲು ನಗರಸಭೆ ಸದಸ್ಯನ ಹತ್ಯೆ
ಜಗನ್ ಮೋಹನ್ ರೆಡ್ಡಿ - ಹತ್ಯೆಗೀಡಾದ ನಗರಸಭೆ ಸದಸ್ಯ
ಕೋಲಾರ: ಮುಳಬಾಗಿಲು ನಗರಸಭೆ ಸದಸ್ಯನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಜಗನ್ ಮೋಹನ್ ರೆಡ್ಡಿ (45) ಹತ್ಯೆಗೀಡಾದ ನಗರಸಭೆ ಸದಸ್ಯ ಎಂದು ತಿಳಿದು ಬಂದಿದೆ.
ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರೂ ಆಗಿರುವ ಜಗನ್ ಮೋಹನ್ ಪಕ್ಷೇತರ ಸದಸ್ಯರಾಗಿದ್ದಾರೆ. ಇವರು ಕಾಂಗ್ರೆಸ್ ಬೆಂಬಲಿತ ಮಾಜಿ ಶಾಸಕ ಕೊತ್ತನೂರು ಮಂಜುನಾಥ್ ಅವರ ಆಪ್ತರಾಗಿದ್ದರು ಎನ್ನಲಾಗಿದೆ.
ಇಂದು (ಮಂಗಳವಾರ) ಬೆಳಿಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಹಲ್ಲೆಗೊಳಗಾದ ಜಗನ್ ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story