ಆರೆಸ್ಸೆಸ್ ನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಭಿನ್ನವೇನಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ, ಜೂ.8: ದಲಿತರೊಬ್ಬರು ಆರೆಸ್ಸೆಸ್ ನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಭಿನ್ನವೇನಲ್ಲ ಎಂದು ಕಾಂಗ್ರೆಸ್ ಮುಖಂಡ, ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, "ಪಠ್ಯಪುಸ್ತಕ ಪರಿಷ್ಕರಣೆ - ಮೇಲ್ವರ್ಗದವರಿಗೆ. ಚಡ್ಡಿ ಹೊರುವ ಕೆಲಸ - ದಲಿತರಿಗೆ. ಇದು ಬಿಜೆಪಿಯ ಆಧುನಿಕ ಮನುಧರ್ಮ" ಎಂದು ಕಿಡಿಕಾರಿದ್ದಾರೆ.
"ದಲಿತರೊಬ್ಬರು ಆರೆಸ್ಸೆಸ್ ನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಭಿನ್ನವೇನಲ್ಲ. ಅಣ್ಣ, ಅಂಬೇಡ್ಕರ್ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ" ಎಂದು ಅವರು ಛಲವಾದಿ ನಾರಾಯಣಸ್ವಾಮಿಗೆ ಕಿವಿಮಾತು ಹೇಳಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ - ಮೇಲ್ವರ್ಗದವರಿಗೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 8, 2022
ಚಡ್ಡಿ ಹೊರುವ ಕೆಲಸ - ದಲಿತರಿಗೆ.
ಇದು ಬಿಜೆಪಿಯ ಆಧುನಿಕ ಮನುಧರ್ಮ.
ದಲಿತರೊಬ್ಬರು RSSನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಬಿನ್ನವೇನಲ್ಲ.@NswamyChalavadi ಅಣ್ಣ, ಅಂಬೇಡ್ಕರ್ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ. pic.twitter.com/GP88ZenrWa