ನಮ್ಮ 32 ಶಾಸಕರಲ್ಲಿ ಒಬ್ಬ ಶಾಸಕ ಅಡ್ಡ ಮತದಾನ ಮಾಡ್ತಾರೆ: ಕುಮಾರಸ್ವಾಮಿ
ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ಈಗಾಗಲೇ ಕೆಲವು ಶಾಸಕರು ವಿಧಾನಸೌಧಕ್ಕೆ ತರಳಿ ಕೊಠಡಿ ಸಂಖ್ಯೆ 106ರಲ್ಲಿ ಮತ ಚಲಾಯಿಸಿದ್ದಾರೆ.
ಅಡ್ಡ ಮತದಾನದ ಸಾಧ್ಯತೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ, 'ಇಂದಿನ ಚುನಾವಣೆಯಲ್ಲಿ ನಮ್ಮ ಪಕ್ಷದ 32 ಶಾಸಕರಲ್ಲಿ 31 ಶಾಸಕರು ನಮ್ಮ ಪಕ್ಷದ ಅಭ್ಯರ್ಥಿಯ ಮತ ಚಲಾಯಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದು, ಈ ಕುರಿತು ಭರವಸೆ ನೀಡಿದ್ದಾರೆ. ಆದರೆ, ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ಗೆ ಮತ ಹಾಕ್ತೀವಿ ಎಂದಿದ್ದಾರೆ. ಸಿದ್ದರಾಮಯ್ಯ ಕೂಡ ನಮ್ಮ ಶಾಸಕರಿಗೆ ಪತ್ರ ಬರೆದಿದ್ದಾರೆ' ಎಂದು ಹೇಳಿದರು.
'ಈ ಚುನಾವಣೆಯ ಬಳಿಕ ಯಾರು ಬಿಜೆಪಿಯ ಬಿ ಟೀಮ್ ಅನ್ನೋದು ಗೊತ್ತಾಗುತ್ತೆ' ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Next Story