ಬೆಳಗಾವಿಯಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರತಿಕೃತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ಬೆಳಗಾವಿ: ಪ್ರವಾದಿ ಮುಹಮ್ಮದ್ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಉಚ್ಛಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿರಿದ ರೀತಿಯಲ್ಲಿ ನೇತುಹಾಕಿರುವುದು ಕಂಡು ಬಂದಿದೆ.
ಬೆಳಗಾವಿ ನಗರದ ಫೋರ್ಟ್ ರಸ್ತೆಯಲ್ಲಿ ನೂಪುರ್ ಶರ್ಮಾ ಅವರ ಭಾವಚಿತ್ರದ ಸಮೇತ ಅವರ ಪ್ರತಿಕೃತಿಯನ್ನು ನೇತುಹಾಕಿದ್ದರು. ಇದರಿಂದ ಶುಕ್ರವಾರ ಬೆಳಿಗ್ಗೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
'ಪ್ರತಿಕೃತಿಯನ್ನು ರಾತ್ರಿ ನೇಣು ಹಾಕಲಾಗಿದ್ದು, ಇಂದು (ಶುಕ್ರವಾರ) ಬೆಳಿಗ್ಗೆ ನಮ್ಮ ಗಮನಕ್ಕೆ ಬಂದಿದೆ. ಬಳಿಕ ಪ್ರತಿಕೃತಿಯನ್ನು ತೆರವುಗೊಳಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದು ಬಂದಿದೆ.
Next Story