ಮಂಡ್ಯ: ಹಾಡಹಗಲೇ ಮಹಿಳೆ ಭೀಕರ ಹತ್ಯೆ
ಮಂಡ್ಯ, ಜೂ.15: ಹಾಡಹಗಲೇ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೋಬಳಿ ಕೇಂದ್ರವಾದ
ಕಿಕ್ಕೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕಿಕ್ಕೇರಿಯ ಚನ್ನರಾಯಪಟ್ಟಣ ರಸ್ತೆಯಲ್ಲಿರುವ ಶ್ರೀಕಾಂತ್ ಮೆಡಿಕಲ್ ಸ್ಟೋರ್ ಮಾಲಕಿ ಪುಷ್ಪಲತಾ ಕೊಲೆಯಾದವರು.
ದುಷ್ಕರ್ಮಿಗಳು ಅವರ ಮನೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆಯಿಂದ ಗ್ರಾಮದ ಜನ ಬೆಚ್ಚಿಬಿದ್ದಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story